ನರೇಂದ್ರ ಮೋದಿ 
ದೇಶ

ಮಂತ್ರವಾದಿಯ ಕರಾಳ ಯುಗ ಶೀಘ್ರ ಅಂತ್ಯ: ಮಾಣಿಕ್‌ ಸರ್ಕಾರ್ ವಿರುದ್ಧ ಮೋದಿ ವಾಗ್ದಾಳಿ

ತ್ರಿಪುರ ಮುಖ್ಯಮಂತ್ರಿ ಮಾಣಿಕ್‌ ಸರ್ಕಾರ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದು, ಮಾಣಿಕ್ ಸರ್ಕಾರ....

ಅಗರ್ತಲಾ: ತ್ರಿಪುರ ಮುಖ್ಯಮಂತ್ರಿ ಮಾಣಿಕ್‌ ಸರ್ಕಾರ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ತೀವ್ರ ವಾಗ್ದಾಳಿ ನಡೆಸಿದ್ದು, ಮಾಣಿಕ್ ಸರ್ಕಾರ ಒಬ್ಬ ಮಂತ್ರವಾದಿ. ಶೀಘ್ರದಲ್ಲೇ ಆತನ ಕರಾಳ ಯುಗ ಅಂತ್ಯವಾಗಲಿದೆ ಎಂದು ಹೇಳಿದ್ದಾರೆ.
ಫೆಬ್ರವರಿ 18ರಂದು ತ್ರಿಪುರ ವಿಧಾನಸಭೆ ಒಂದೇ ಹಂತದಲ್ಲಿ ಚುನಾವಣೆ ನಡೆಯುತ್ತಿದ್ದು, ಇಂದು ಅಗರ್ತಲಾದಲ್ಲಿ ಬಿಜೆಪಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮಾಣಿಕ್‌ ಸರ್ಕಾರ ಅವರ ಸರ್ಕಾರವನ್ನು "ಹೀರಾ'' ಸರ್ಕಾರ್‌ ಬದಲಿಸಲಿದೆ. ಹೀರಾ ಎಂದರೆ ಹೈವೇ, ಐ-ವೇ (ಡಿಜಿಟಲ್‌ ಕನೆಕ್ಟಿವಿಟಿ) , ರೋಡ್‌ ವೇ ಮತ್ತು ಏರ್‌ ವೇ - ಎಂದು ಹೇಳಿದರು. 
ಇಲ್ಲಿ ಅಜ್ಞಾತ ಮಂತ್ರವಾದಿಯ ಸರ್ಕಾರವಿದ್ದು, ಈಗ ಅದಕ್ಕೆ ಕೊನೆಗಾಲ ಬಂದಿದೆ. ಇನ್ನು ಮುಂದೆ ತ್ರಿಪುರದಲ್ಲಿ ಅಭಿವೃದ್ಧಿಯ ಮಹಾಪರ್ವ ಆರಂಭವಾಗಲಿದೆ ಎಂದು ಪ್ರಧಾನಿ ಹೇಳಿದರು.
ಮಾಣಿಕ್‌ ಸರ್ಕಾರ್‌ ನೇತೃತ್ವದ ಸಿಪಿಐ ಆಡಳಿತೆಯಲ್ಲಿ ಜನರು ಕನಿಷ್ಠ ವೇತನವನ್ನು ಪಡೆಯುತ್ತಿಲ್ಲ. ಈ ಸರ್ಕಾರ ಜನರನ್ನು ವಂಚಿಸುತ್ತಿದೆ ಎಂದು ಪ್ರಧಾನಿ ಮೋದಿ ಆರೋಪಿಸಿದರು. ಅಲ್ಲದೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಂ ನಂತರ ಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT