ಮೊಹಮ್ಮದ್ ಅಫ್ಜಲ್ ಗುರು 
ದೇಶ

ಅಫ್ಜಲ್ ಗುರು ಗಲ್ಲಿಗೇರಿಸಿ 5 ವರ್ಷ: ಕಾಶ್ಮೀರದ ಹಲವೆಡೆ ನಿರ್ಬಂಧ ಹೇರಿಕೆ

ಸಂಸತ್ ಭವನದ ಮೇಲೆ ದಾಳಿ ಮಡಾದಿದ್ ಅಪರಾಧಕ್ಕಾಗಿ ಮೊಹಮ್ಮದ್ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿ 5 ವರ್ಷಗಳಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಕಾಶ್ಮೀರದ ಹಲವೆಡೆ ಶುಕ್ರವಾರ ನಿರ್ಬಂಧ ಹೇರಿದೆ...

ಶ್ರೀನಗರ: ಸಂಸತ್ ಭವನದ ಮೇಲೆ ದಾಳಿ ಮಡಾದಿದ್ ಅಪರಾಧಕ್ಕಾಗಿ ಮೊಹಮ್ಮದ್ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿ 5 ವರ್ಷಗಳಾಗಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವ ಜಮ್ಮು ಮತ್ತು ಕಾಶ್ಮೀರ ಸರ್ಕಾರ ಕಾಶ್ಮೀರದ ಹಲವೆಡೆ ಶುಕ್ರವಾರ ನಿರ್ಬಂಧ ಹೇರಿದೆ. 
ಅಫ್ಜಲ್ ಗುರು ಸಾವನ್ನಪ್ಪಿ ಇಂದಿಗೆ ಐದು ವರ್ಷಗಳು ಕಳೆದಿದ್ದು, ಈ ಸಂದರ್ಭದಲ್ಲಿ ಪ್ರತ್ಯೇಕತಾವಾದಿಗಳು ಕಾಶ್ಮೀರ ಬಂದ್'ಗೆ ಕರೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಕಾಶ್ಮೀರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. 
ಶ್ರೀನಗರದ ಹಳೇ ನಗರ ಪ್ರದೇಶ, ಉತ್ತರ ಮತ್ತು ದಕ್ಷಿಣ ಕಾಶ್ಮೀರದ ಹಲವು ಪ್ರದೇಶಗಳಲ್ಲಿ ನಿರ್ಬಂಧ ಹೇರಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಹಿರಿಯ ಪ್ರತ್ಯೇಕತವಾದಿ ನಾಯಕರುಗಳಾದ ಸಯ್ಯದ್ ಅಲಿ ಗಿಲಾನಿ ಮತ್ತು ಮಿರ್ವೈಜ್ ಉಮರ್ ಫರಾಖ್ ಅವರನ್ನು ಈಗಾಗಲೇ ಗೃಹ ಬಂಧನದಲ್ಲಿರಿಸಲಾಗಿದ್ದು, ಮುಹಮ್ಮದ್ ಯಾಸಿನ ಮಲಿಕ್ ಅವರನ್ನು ಕೇಂದ್ರೀಯ ಕಾರಾಗೃಹದಲ್ಲಿರಿಸಲಾಗಿದೆ ಎಂದು ತಿಳಿದುಬಂದಿದೆ. 
ಹಲವೆಡೆ ನಿರ್ಬಂಧ ಹೇರಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉತ್ತರ ಕಾಶ್ಮೀರದ ಬಾರಾಮುಲ್ಲಾ ಮತ್ತು ಬನ್ನಿಹಾಲ್ ಟೌನ್ ನಲ್ಲಿ ರೈಲು ಸೇವೆಗಳನ್ನು ನಿಷೇಧಿಸಲಾಗಿದೆ.  
ಸಂಸತ್ತಿನ ಮೇಲೆ ದಾಳಿ ನಡೆಸಿರುವ ಪ್ರಕರಣದಲ್ಲಿ ಅಫ್ಜಲ್ ಗುರು ಅಪರಾಧಿಯೆಂದು ಸಾಬೀತಾದ ಬಳಿಕ ರಾಜಧಾನಿ ದೆಹಲಿಯ ತಿಹಾರ್ ಜೈಲಿನಲ್ಲಿ 2013ರ ಫೆ.9 ರಂದು ಅಫ್ಜಲ್ ಗುರುನನ್ನು ಗಲ್ಲಿಗೇರಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT