ಸಂಗ್ರಹ ಚಿತ್ರ 
ದೇಶ

ಪ್ರತಿಭಟನೆಗೆ ಮಣಿದ ಕೇಂದ್ರ, ಆಂಧ್ರ ಪ್ರದೇಶಕ್ಕೆ 1269 ಕೋಟಿ ಅನುದಾನ!

ವಿಭಜಿತ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಆಂಧ್ರ ಸಂಸದರು ನಡೆಸುತ್ತಿದ್ದ ಪ್ರತಿಭಟನೆಗೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದ್ದು, 1269 ಕೋಟಿ ರೂ.ಗಳ ಆರ್ಥಿಕ ಅನುದಾನ ಘೋಷಣೆ ಮಾಡಿದೆ.

ನವದೆಹಲಿ: ವಿಭಜಿತ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಆಂಧ್ರ ಸಂಸದರು ನಡೆಸುತ್ತಿದ್ದ ಪ್ರತಿಭಟನೆಗೆ ಕೊನೆಗೂ ಕೇಂದ್ರ ಸರ್ಕಾರ ಮಣಿದಿದ್ದು, 1269 ಕೋಟಿ ರೂ.ಗಳ ಆರ್ಥಿಕ ಅನುದಾನ ಘೋಷಣೆ ಮಾಡಿದೆ.
ಈ ಬಗ್ಗೆ ಕೇಂದ್ರ ನೀರಾವರಿ ಇಲಾಖೆಯ ಜಂಟಿ ಆಯುಕ್ತ ಆರ್ ಪಿಎಸ್ ವರ್ಮಾ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ವಿಭಜಿತ ಆಂಧ್ರ ಪ್ರದೇಶಕ್ಕೆ ಒಟ್ಟು 1269 ಕೋಟಿ ರೂ.ಗಳ ಆರ್ಥಿಕ ಅನುದಾನ ಘೋಷಿಸಲಾಗಿದೆ ಎಂದು  ಮಾಹಿತಿ ನೀಡಿದರು. ಈ ಪೈಕಿ ಟಿಡಿಪಿ ಮತ್ತು ಬಿಜೆಪಿ ನಡುವಿನ ತಿಕ್ಕಾಟಕ್ಕೆ ಕಾರಣವಾಗಿರುವ ಪೋಲವರಂ ನೀರಾವರಿ ಯೋಜನೆಗೆ 417.44 ಕೋಟಿ ರೂ ಮೀಸಲಿರಿಸಲಾಗಿದ್ದು, ಸ್ಥಳೀಯ ನಗರಾಭಿವೃದ್ಧಿ ಸಂಸ್ಷೆಗಳಿಗೆ ಒಟ್ಟು 253.74  ಕೋಟಿ ರೂಗಳನ್ನು ಮೀಸಲಿಡಲಾಗಿದೆ. ಅಂತೆಯೇ ಅಂಗನವಾಡಿ ಯೋಜನೆ ಮತ್ತು ಪೂರಕ ಪೋಷಕ ಆಹಾರ ಯೋಜನೆಗೆ 196.92 ಕೋಟಿ ಮತ್ತು ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ 31.76   ಕೋಟಿ ನೀಡಲಾಗಿದೆ.
ಇನ್ನು ಆದಾಯದ ಕೊರತೆ ಅನುದಾನ ಅಡಿಯಲ್ಲಿ 369.16 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇದೇ ವಿಚಾರ ಸಂಬಂಧ ಪೋಲವರಂ ನೀರಾವರಿ ಯೋಜನೆ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದು,  ಈ ಬಹು ಉದ್ದೇಶಿತ ಯೋಜನೆಗಾಗಿ ಪ್ರಾಧಿಕಾರ ಒಟ್ಟು 4,329 ಕೋಟಿ ಬಿಡುಗಡೆ ಮಾಡಿದೆ ಎಂದು ಹೇಳಿದೆ. ಅಂತೆಯೇ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಿದ ಬಳಿಕ ರಾಜ್ಯ ಸರ್ಕಾರ 7,200 ಖರ್ಚು  ಮಾಡಿದೆ ಎಂದು ಹೇಳಿದೆ. 
ಒಟ್ಟಾರೆ ಆಂಧ್ರ ಪ್ರದೇಶ ಸಂಸದರ ಪ್ರತಿಭಟನೆ ಎದುರಿಸುತ್ತಿದ್ದ ಕೇಂದ್ರ ಸರ್ಕಾರ ವಿಭಜಿತ ಆಂಧ್ರ ಪ್ರದೇಶಕ್ಕೆ ಅನುದಾನ ನೀಡುವ ಮೂಲಕ ಸಂಸದರ ಶಾಂತವಾಗಿಸುವ ಪ್ರಯತ್ನ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT