ಸಾಂದರ್ಭಿಕ ಚಿತ್ರ 
ದೇಶ

'ಆಧಾರ್' ಇಲ್ಲವೆಂದು ಫಲಾನುಭವಿಗಳಿಗೆ ಅಗತ್ಯ ಸೇವೆಗಳನ್ನು ನಿರಾಕರಿಸುವಂತಿಲ್ಲ:ಯುಐಡಿಎಐ

ಬಯೋಮೆಟ್ರಿಕ್ ಆಧಾರ್ ಗುರುತು ಪತ್ರವಿಲ್ಲವೆಂದು ಜನರಿಗೆ ಅಗತ್ಯ ಸೇವೆಗಳಾದ ವೈದ್ಯಕೀಯ ಸೌಲಭ್ಯ....

ನವದೆಹಲಿ: ಬಯೋಮೆಟ್ರಿಕ್ ಆಧಾರ್ ಗುರುತು ಪತ್ರವಿಲ್ಲವೆಂದು ಜನರಿಗೆ ಅಗತ್ಯ ಸೇವೆಗಳಾದ ವೈದ್ಯಕೀಯ ಸೌಲಭ್ಯ, ಶಾಲಾ ಪ್ರವೇಶಾತಿ, ರೇಷನ್ ಕಾರ್ಡು ಇತ್ಯಾದಿಗಳನ್ನು ನಿರಾಕರಿಸಬಾರದು ಎಂದು ಆಧಾರ್ ಸಂಖ್ಯೆ ನೀಡುವ ಪ್ರಾಧಿಕಾರ ಯುಐಡಿಎಐ ತಿಳಿಸಿದೆ.
ಸರ್ಕಾರದ ಯೋಜನೆಗಳ ನಿಜವಾದ ಫಲಾನುಭವಿಗಳಿಗೆ ಅವರ ಅಗತ್ಯ ಸೇವೆಗಳನ್ನು ಸರ್ಕಾರಿ ಇಲಾಖೆಗಳು ಮತ್ತು ಆಡಳಿತ ನಿರ್ದೇಶನಾಲಯಗಳು ನಿರಾಕರಿಸಬಾರದು ಎಂದು ಭಾರತೀಯ ವಿಶಿಷ್ಟ ಗುರುತು ಪ್ರಾಧಿಕಾರ ಹೇಳಿಕೆಯಲ್ಲಿ ತಿಳಿಸಿದೆ.
2017, ಅಕ್ಟೋಬರ್ 24ರಂದು ಯುಐಡಿಎಐ ಹೊರಡಿಸಿರುವ ಸುತ್ತೋಲೆಯಲ್ಲಿ ಆಧಾರ್ ಸಂಖ್ಯೆಯನ್ನು ನಿಭಾಯಿಸುವ ನಿಯಮಗಳಲ್ಲಿ ವಿನಾಯಿತಿಯಿದೆ. ಇದನ್ನು ಸರ್ಕಾರದ ಎಲ್ಲಾ ಇಲಾಖೆಗಳು ಕಡ್ಡಾಯವಾಗಿ ಪಾಲಿಸಬೇಕೆಂದು ಪ್ರಾಧಿಕಾರ ಹೇಳಿದೆ.
ಆಸ್ಪತ್ರೆ ವೆಚ್ಚ, ವೈದ್ಯಕೀಯ ಸೇವೆಯಂತಹ ಅಗತ್ಯ ಸೇವೆಗಳನ್ನು ಆಧಾರ್ ಸಂಖ್ಯೆ ಇಲ್ಲವೆಂದು ಫಲಾನುಭವಿಗಳಿಗೆ ನಿರಾಕರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಾಧಿಕಾರ ಈ ಸುತ್ತೋಲೆ ಹೊರಡಿಸಿದೆ. ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯಿಲ್ಲವೆಂದು ಅಗತ್ಯ ಸೇವೆಗಳನ್ನು ನೀಡಲು ನಿರಾಕರಿಸಿದ್ದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ಸಹ ನೀಡಿದೆ.
ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ತಂತ್ರಜ್ಞಾನಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಹೆಚ್ಚಿನ ನಿಖರತೆ ಮತ್ತು ಪಾರದರ್ಶಕತೆ ತರಲು ಆಧಾರ್ ಸಂಖ್ಯೆಯನ್ನು ಜಾರಿಗೆ ತರಲಾಗಿದ್ದು ಅದರ ದುರುಪಯೋಗವಾಗಬಾರದು ಮತ್ತು ಫಲಾನುಭವಿಗಳಿಗೆ ಅಗತ್ಯ ಸೇವೆಗಳ ನೀಡಿಕೆಯಲ್ಲಿ ವಿಳಂಬವಾಗಬಾರದು ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!