ಬಾಬ್ರಿ ಮಸೀದಿ 
ದೇಶ

ಶಾಶ್ವತವಾಗಿ 'ಬಾಬ್ರಿ' ಮಸೀದಿಯಾಗೆ ಉಳಿಯುತ್ತದೆ: ಎಐಎಂಪಿಎಲ್‌ಬಿ

ಶಾಶ್ವತವಾಗಿ 'ಬಾಬ್ರಿ' ಮಸೀದಿಯಾಗೆ ಉಳಿಯುತ್ತದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‌ಬಿ) ಹೇಳಿದೆ...

ನವದೆಹಲಿ: ಶಾಶ್ವತವಾಗಿ 'ಬಾಬ್ರಿ' ಮಸೀದಿಯಾಗೆ ಉಳಿಯುತ್ತದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‌ಬಿ) ಹೇಳಿದೆ. 
ನ್ಯಾಯಾಲಯದ ಹೊರಗೆ ಬಾಬ್ರಿ ಮಸೀದಿ-ರಾಮಮಂದಿರ ವಿವಾದ ಇತ್ಯರ್ಥ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ತನ್ನ ಒಪ್ಪಿಗೆ ಇಲ್ಲದೆ ಅಯೋಧ್ಯೆ ವಿವಾದವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥ ಮಾಡುವ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಮೌಲಾನ ಸಲ್ಮಾನ್ ನದ್ವಿ ಅವರನ್ನು ಎಐಎಂಪಿಎಲ್‌ಬಿ ವಜಾ ಮಾಡಿದೆ. 
ಎಐಎಂಪಿಎಲ್‌ಬಿ ಸದಸ್ಯರಾಗಿರುವ ಸಲ್ಮಾನ್ ನದ್ವಿ ಎರಡು ದಿನಗಳ ಹಿಂದೆ ರವಿಶಂಕರ್ ಗುರೂಜಿಯನ್ನು ಭೇಟಿಯಾಗಿ ಅಯೋಧ್ಯೆ ವಿಚಾರವಾಗಿ ಮಾತುಕತೆ ನಡೆಸಿದ್ದರು. ಹೀಗಾಗಿ ಅವರನ್ನು ಎಐಎಂಪಿಎಲ್‌ಬಿ ವಜಾ ಮಾಡಿದೆ. 
ಇನ್ನು ಅಯೋಧ್ಯೆ ವಿವಾದ ಕುರಿತಂತೆ ನ್ಯಾಯಾಲಯದ ತೀರ್ಮಾನವನ್ನೇ ನೆಚ್ಚಿಕೊಳ್ಳುವ ತನ್ನ ನಿಲುವನ್ನು ಪುನರುಚ್ಚರಿಸಿದ ಮಂಡಳಿ ಸಲ್ಮಾನ್ ನದ್ವಿಯವರು ಮಂಡಳಿಯ ನಿಲುವಿನ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ವಜಾಗೊಳಿಸಲಾಗಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT