ಬಾಬ್ರಿ ಮಸೀದಿ 
ದೇಶ

ಶಾಶ್ವತವಾಗಿ 'ಬಾಬ್ರಿ' ಮಸೀದಿಯಾಗೆ ಉಳಿಯುತ್ತದೆ: ಎಐಎಂಪಿಎಲ್‌ಬಿ

ಶಾಶ್ವತವಾಗಿ 'ಬಾಬ್ರಿ' ಮಸೀದಿಯಾಗೆ ಉಳಿಯುತ್ತದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‌ಬಿ) ಹೇಳಿದೆ...

ನವದೆಹಲಿ: ಶಾಶ್ವತವಾಗಿ 'ಬಾಬ್ರಿ' ಮಸೀದಿಯಾಗೆ ಉಳಿಯುತ್ತದೆ ಎಂದು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್‌ಬಿ) ಹೇಳಿದೆ. 
ನ್ಯಾಯಾಲಯದ ಹೊರಗೆ ಬಾಬ್ರಿ ಮಸೀದಿ-ರಾಮಮಂದಿರ ವಿವಾದ ಇತ್ಯರ್ಥ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ತನ್ನ ಒಪ್ಪಿಗೆ ಇಲ್ಲದೆ ಅಯೋಧ್ಯೆ ವಿವಾದವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥ ಮಾಡುವ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಮೌಲಾನ ಸಲ್ಮಾನ್ ನದ್ವಿ ಅವರನ್ನು ಎಐಎಂಪಿಎಲ್‌ಬಿ ವಜಾ ಮಾಡಿದೆ. 
ಎಐಎಂಪಿಎಲ್‌ಬಿ ಸದಸ್ಯರಾಗಿರುವ ಸಲ್ಮಾನ್ ನದ್ವಿ ಎರಡು ದಿನಗಳ ಹಿಂದೆ ರವಿಶಂಕರ್ ಗುರೂಜಿಯನ್ನು ಭೇಟಿಯಾಗಿ ಅಯೋಧ್ಯೆ ವಿಚಾರವಾಗಿ ಮಾತುಕತೆ ನಡೆಸಿದ್ದರು. ಹೀಗಾಗಿ ಅವರನ್ನು ಎಐಎಂಪಿಎಲ್‌ಬಿ ವಜಾ ಮಾಡಿದೆ. 
ಇನ್ನು ಅಯೋಧ್ಯೆ ವಿವಾದ ಕುರಿತಂತೆ ನ್ಯಾಯಾಲಯದ ತೀರ್ಮಾನವನ್ನೇ ನೆಚ್ಚಿಕೊಳ್ಳುವ ತನ್ನ ನಿಲುವನ್ನು ಪುನರುಚ್ಚರಿಸಿದ ಮಂಡಳಿ ಸಲ್ಮಾನ್ ನದ್ವಿಯವರು ಮಂಡಳಿಯ ನಿಲುವಿನ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ವಜಾಗೊಳಿಸಲಾಗಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT