ಎನ್ ಕೌಂಟರ್ ಮುಂದುವರೆಸಿರುವ ಭದ್ರತಾ ಸಿಬ್ಬಂದಿ 
ದೇಶ

ಸಂಜ್ವಾನ್ ಸೇನಾ ಕ್ಯಾಂಪ್, ಕರಣ್ ನಗರ ಉಗ್ರ ದಾಳಿಯ ಹೊಣೆ ಹೊತ್ತ ಎಲ್ ಇಟಿ

ಜಮ್ಮು ಮತ್ತು ಕಾಶ್ಮೀರದ ಸಜ್ವಾನ್ ಸೇನಾ ಕ್ಯಾಂಪ್ ಹಾಗೂ ಕರಣ್ ನಗರದಲ್ಲಿನ ಸಿಆರ್ ಪಿಎಫ್ ಕ್ಯಾಂಪ್ ಮೇಲೆ ನಡೆದ ಉಗ್ರ ದಾಳಿಯ ಹೊಣೆಯನ್ನು....

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಜ್ವಾನ್ ಸೇನಾ ಕ್ಯಾಂಪ್ ಹಾಗೂ ಕರಣ್  ನಗರದಲ್ಲಿನ ಸಿಆರ್ ಪಿಎಫ್ ಕ್ಯಾಂಪ್ ಮೇಲೆ ನಡೆದ ಉಗ್ರ ದಾಳಿಯ ಹೊಣೆಯನ್ನು ಲಷ್ಕರ್ ಇ ತೊಯ್ಬಾ(ಎಲ್ ಇಟಿ) ಉಗ್ರ ಸಂಘಟನೆ ಸೋಮವಾರ ಹೊಣೆ ಹೊತ್ತುಕೊಂಡಿದೆ.
ಇಂದು ಬೆಳಗಿನ ಜಾವ ಇಬ್ಬರು ಶಸ್ತ್ರ ಸಜ್ಜಿತ ಉಗ್ರರು ಶ್ರೀನಗರದ ಕರಣ್ ನಗರದಲ್ಲಿರುವ ಸಿಆರ್ ಪಿಎಫ್ ನ 23ನೇ ಬಟಾಲಿಯನ್ ಮೇಲೆ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ಉಗ್ರರೊಂದಿಗೆ ಎನ್ ಕೌಂಟರ್ ಮುಂದುವರೆದಿದೆ.
ಕಳೆದ ಶನಿವಾರ ಜಮ್ಮುವಿನ ಸಂಜ್ವಾನ್ ಸೇನಾ ಕ್ಯಾಂಪ್ ನಡೆದ ಉಗ್ರ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು ಮತ್ತು ಓರ್ವ ನಾಗರಿಕ ಮೃತಪಟ್ಟಿದ್ದರು. ಅಲ್ಲದೆ ಆರು ಸೇನಾ ಸಿಬ್ಬಂದಿ ಸೇರಿದಂತೆ 12 ಮಂದಿ ಗಾಯಗೊಂಡಿದ್ದರು.
ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ ನಾಲ್ವರು ಎಲ್ ಇಟಿ ಉಗ್ರರನ್ನು ಸೇನೆ ಹೊಡೆದುರುಳಿಸಿತ್ತು. ಇತರೆ ಉಗ್ರರಿಗಾಗಿ ಈಗಲೂ ಸಂಜ್ವಾನ್ ನಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದೆ.
ಸರಣಿ ಉಗ್ರ ದಾಳಿಯ ನಂತರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಭದ್ರತೆಯನ್ನು ಪರಿಶೀಲಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT