ಎನ್ ಕೌಂಟರ್ ಮುಂದುವರೆಸಿರುವ ಭದ್ರತಾ ಸಿಬ್ಬಂದಿ 
ದೇಶ

ಸಂಜ್ವಾನ್ ಸೇನಾ ಕ್ಯಾಂಪ್, ಕರಣ್ ನಗರ ಉಗ್ರ ದಾಳಿಯ ಹೊಣೆ ಹೊತ್ತ ಎಲ್ ಇಟಿ

ಜಮ್ಮು ಮತ್ತು ಕಾಶ್ಮೀರದ ಸಜ್ವಾನ್ ಸೇನಾ ಕ್ಯಾಂಪ್ ಹಾಗೂ ಕರಣ್ ನಗರದಲ್ಲಿನ ಸಿಆರ್ ಪಿಎಫ್ ಕ್ಯಾಂಪ್ ಮೇಲೆ ನಡೆದ ಉಗ್ರ ದಾಳಿಯ ಹೊಣೆಯನ್ನು....

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಜ್ವಾನ್ ಸೇನಾ ಕ್ಯಾಂಪ್ ಹಾಗೂ ಕರಣ್  ನಗರದಲ್ಲಿನ ಸಿಆರ್ ಪಿಎಫ್ ಕ್ಯಾಂಪ್ ಮೇಲೆ ನಡೆದ ಉಗ್ರ ದಾಳಿಯ ಹೊಣೆಯನ್ನು ಲಷ್ಕರ್ ಇ ತೊಯ್ಬಾ(ಎಲ್ ಇಟಿ) ಉಗ್ರ ಸಂಘಟನೆ ಸೋಮವಾರ ಹೊಣೆ ಹೊತ್ತುಕೊಂಡಿದೆ.
ಇಂದು ಬೆಳಗಿನ ಜಾವ ಇಬ್ಬರು ಶಸ್ತ್ರ ಸಜ್ಜಿತ ಉಗ್ರರು ಶ್ರೀನಗರದ ಕರಣ್ ನಗರದಲ್ಲಿರುವ ಸಿಆರ್ ಪಿಎಫ್ ನ 23ನೇ ಬಟಾಲಿಯನ್ ಮೇಲೆ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ಉಗ್ರರೊಂದಿಗೆ ಎನ್ ಕೌಂಟರ್ ಮುಂದುವರೆದಿದೆ.
ಕಳೆದ ಶನಿವಾರ ಜಮ್ಮುವಿನ ಸಂಜ್ವಾನ್ ಸೇನಾ ಕ್ಯಾಂಪ್ ನಡೆದ ಉಗ್ರ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದರು ಮತ್ತು ಓರ್ವ ನಾಗರಿಕ ಮೃತಪಟ್ಟಿದ್ದರು. ಅಲ್ಲದೆ ಆರು ಸೇನಾ ಸಿಬ್ಬಂದಿ ಸೇರಿದಂತೆ 12 ಮಂದಿ ಗಾಯಗೊಂಡಿದ್ದರು.
ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ ನಾಲ್ವರು ಎಲ್ ಇಟಿ ಉಗ್ರರನ್ನು ಸೇನೆ ಹೊಡೆದುರುಳಿಸಿತ್ತು. ಇತರೆ ಉಗ್ರರಿಗಾಗಿ ಈಗಲೂ ಸಂಜ್ವಾನ್ ನಲ್ಲಿ ಕೂಂಬಿಂಗ್ ಕಾರ್ಯಾಚರಣೆ ಮುಂದುವರೆದಿದೆ.
ಸರಣಿ ಉಗ್ರ ದಾಳಿಯ ನಂತರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿದ್ದು, ಭದ್ರತೆಯನ್ನು ಪರಿಶೀಲಿಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT