ಕರಣ್ ನಗರ ಜನವಸತಿ ಪ್ರದೇಶದಲ್ಲಿ ಉಗ್ರರ ದಾಳಿ 
ದೇಶ

ಸುಂಜವಾನ್ ದಾಳಿ ಬೆನ್ನಲ್ಲೇ ಕಾಶ್ಮೀರದಲ್ಲಿ ಮತ್ತೊಂದು ಉಗ್ರ ದಾಳಿ, ಓರ್ವ ಯೋಧ ಹುತಾತ್ಮ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಸುಂಜವಾನ್ ಸೇನಾ ಕ್ಯಾಂಪ್ ಮೇಲಿನ ಉಗ್ರ ದಾಳಿ ಬೆನ್ನಲೇ ಜಮ್ಮುವಿನಲ್ಲಿ ಮತ್ತೊಂದು ಉಗ್ರ ದಾಳಿ ನಡೆದಿದ್ದು, ಜಮ್ಮುವಿನಲ್ಲಿ ಅವಿತಿರುವ ಉಗ್ರರು...

ಜಮ್ಮು: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಸುಂಜವಾನ್ ಸೇನಾ ಕ್ಯಾಂಪ್ ಮೇಲಿನ ಉಗ್ರ ದಾಳಿ ಬೆನ್ನಲೇ ಜಮ್ಮುವಿನಲ್ಲಿ ಮತ್ತೊಂದು ಉಗ್ರ ದಾಳಿ ನಡೆದಿದ್ದು, ಜಮ್ಮುವಿನಲ್ಲಿ ಅವಿತಿರುವ ಉಗ್ರರು ಸೇನಾಪಡೆಗಳ ಮೇಲೆ  ಗುಂಡಿನ ದಾಳಿ ನಡೆಸಿದ್ದಾರೆ.
ಜಮ್ಮುವಿನ ಕರಣ್ ನಗರ ಜನವಸತಿ ಪ್ರದೇಶದಲ್ಲಿ ಲಷ್ಕರ್ ಇ ತೊಯ್ಹಾ ಉಗ್ರ ಸಂಘಟನೆಯ ಉಗ್ರಗಾಮಿಗಳು ದಾಳಿ ನಡೆಸಿದ್ದು, ಕಟ್ಟಡವೊಂದರಲ್ಲಿ ಅವಿತು ಕುಳಿತು ಸೇನೆಯ ಮೇಲೆ ನಿರಂತರ ಗುಂಡಿನ ದಾಳಿ ನಡೆಸುತ್ತಿದ್ದಾರೆ.  ಸೇನಾ ಮೂಲಗಳ ಪ್ರಕಾರ ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಕರಣ್ ನಗರದ ಜನವಸತಿ ಪ್ರದೇಶದ ಕಟ್ಟಡವೊಂದರಲ್ಲಿ ಅವಿತಿದ್ದು, ಸತತ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಪ್ರಸ್ತುತ  ಕಟ್ಟಡವನ್ನು ಸೇನಾಪಡೆಗಳು ಸುತ್ತುವರೆದಿದ್ದು, ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದ್ದಾರೆ.
ಮುಂಜಾಗ್ರತಾ ಕ್ರಮವಾಗಿ ಅಕ್ಕಪಕ್ಕದಲ್ಲಿರುವ ಕಟ್ಟಡದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದ್ದು, ಖುದ್ಧು ಸೇನಾಪಡೆಯ ಸಿಬ್ಬಂದಿಗಳೇ ನಾಗರಿಕರನ್ನು ತೆರವುಗೊಳಿಸಿದ್ದಾರೆ. ಕರಣ್ ನಗರದ  ಸಮೀಪದಲ್ಲೇ ಸೇನೆಯ ಸಿಆರ್ ಪಿಎಫ್ ಸೇನಾ ಶಿಬಿರವಿದ್ದು, ಇದರೊಳೆಗೆ ನುಸುಳಿ ದಾಳಿ ಮಾಡಬೇಕು ಎನ್ನವುದು ಉಗ್ರ ಯೋಜನೆಯಾಗಿತ್ತು. ಆದರೆ ಇದಕ್ಕೂ ಮೊದಲೇ ಸೇನಾಪಡೆಗಳನ್ನು ಉಗ್ರರನ್ನು ಗುರುತಿಸುವ ಮೂಲಕ  ಆಗಬಹುದಾಗಿದ್ದ ದೊಡ್ಡ ಅಪಾಯವನ್ನು ತಪ್ಪಿಸಿದ್ದಾರೆ.
ಇನ್ನು ನಿನ್ನೆ ರಾತ್ರಿಯಿಂದಲೇ ಕಾರ್ಯಾಚರಣೆ ನಡೆಯುತ್ತಿದ್ದು, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನಾಗಿದ್ದು, ಮತ್ತೋರ್ವ ಪೊಲೀಸ್ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT