ಉತ್ತರ ಪ್ರದೇಶ: ವಿವಾಹ ಸಂಭ್ರಮಕ್ಕಾಗಿ ನಡೆಸಿದ ಫೈರಿಂಗ್ ನಿಂದ ಯೋಧ ಸಾವು 
ದೇಶ

ಉತ್ತರ ಪ್ರದೇಶ: ವಿವಾಹ ಸಂಭ್ರಮಕ್ಕಾಗಿ ನಡೆಸಿದ ಫೈರಿಂಗ್ ನಿಂದ ಯೋಧ ಸಾವು

ವಿವಾಹ ಕಾರ್ಯಕ್ರಮವೊಂದರಲ್ಲಿ ಸಂಭ್ರಮಾಚರಣೆ ವೇಳೆ ಹಾರಿಸಿದ ಗುಂಡಿನಿಂದ ಯೋಧ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಕಾನ್ಪುರ: ವಿವಾಹ ಕಾರ್ಯಕ್ರಮವೊಂದರಲ್ಲಿ ಸಂಭ್ರಮಾಚರಣೆ ವೇಳೆ ಹಾರಿಸಿದ ಗುಂಡಿನಿಂದ ಯೋಧ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಕಾನ್ಪುರದದ ಶ್ಯಾಮ್ ನಗರದಲ್ಲಿ ಈ ದುರ್ಘಟನೆ ಸಂಬವಿಸಿಎ ಎಂದು ಪೋಲೀಸರು ತಿಳಿಸಿದ್ದಾರೆ.
ಕುಲ್ದೀಪ್ ದೀಕ್ಷಿತ್, ಮೃತ ಸೈನಿಕನಾಗಿದ್ದು ತನ್ನ ಸ್ನೇಹಿತ, ಶಿವ ಪ್ರಕಾಶ್ ವಿವಾಹದಲ್ಲಿ ಭಾಗವಹಿಸಿದ್ದ ವೇಳೆ ಸಂಭ್ರಮಾಚರಣೆ ಅಂಗವಾಗಿ ನಡೆದ ಫೈರಿಂಗ್ ವೇಳೆ ತನ್ನ ಪರವಾನಗಿ ಹೊಂದಿದ್ದ ಪಿಸ್ತೂಲಿನಿಂದ ಹಾರಿದ್ದ ಗುಂಡು ತಗುಲಿ ಮೃತಪಟ್ಟಿದ್ದಾನೆ.  ಅತಿಥಿಗಳು ಸಂಭ್ರಮದ ನೃತ್ಯವಾಡುತ್ತಿದ್ದಾಗ ಮೃತನ ಇನ್ನೊಬ್ಬ ಸ್ನೇಹಿತ, ಸಂಜಯ್ ಮೌರ್ಯ ಗಾಳಿಯಲ್ಲಿ ಅನೇಕ ಸುತ್ತು ಗುಂಡು ಹಾರಿಸಿದ್ದನು. ಅದರಲ್ಲಿ ಒಂದು ಗುಂಡು ಆಕಸ್ಮಿಕವಾಗಿ ದೀಕ್ಷಿತ್ ಹೊಟ್ಟೆಯನ್ನು ಹೊಕ್ಕಿತ್ತು ಎಂದು ಪೋಲೀಸ್ ಅಧೀಕ್ಷಕ (ಪೂರ್ವ) ಅನುರಾಗ್ ಆರ್ಯ ಹೇಳಿದ್ದಾರೆ.
ತಕ್ಷಣ ದೀಕ್ಷಿತ್ ನನ್ನು ಕಾನ್ಶಿರಾಂ ಚಿಕಿತ್ಸಾ ಕೇಂದ್ರಕ್ಕೆ ದಾಖಲಿಸಲಾಯಿತಾದರೂ ಅಲ್ಲಿನ ವೈದ್ಯರು ಯೋಧನು ಅದಾಗಲೇ ಮರಣವನ್ನಪ್ಪಿದ್ದಾನೆಂದು ದೃಢಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT