ಓವರ್ ಟೇಕ್ ಮಾಡಿದ್ದಕ್ಕೆ ಕ್ಯಾಬ್ ಚಾಲಕನ ಹತ್ಯೆ! 
ದೇಶ

ಓವರ್ ಟೇಕ್ ಮಾಡಿದ್ದಕ್ಕೆ ಕ್ಯಾಬ್ ಚಾಲಕನ ಹತ್ಯೆ!

ವಾಹನವನ್ನು ಹಿಂದಿಕ್ಕಿದ್ದಕ್ಕಾಗಿ ಕ್ಯಾಬ್ ಚಾಲಕನನ್ನು ದ್ವಿಚಕ್ರವಾಹನ ಚಲಾಯಿಸುತ್ತಿದ್ದವರು ಹತ್ಯೆ ಮಾಡಿರುವ ಘಟನೆ ಮುಂಬೈ ನಲ್ಲಿ ನಡೆದಿದೆ.

ಮುಂಬೈ: ವಾಹನವನ್ನು ಹಿಂದಿಕ್ಕಿದ್ದಕ್ಕಾಗಿ ಕ್ಯಾಬ್ ಚಾಲಕನನ್ನು ದ್ವಿಚಕ್ರವಾಹನ ಚಲಾಯಿಸುತ್ತಿದ್ದವರು ಹತ್ಯೆ ಮಾಡಿರುವ ಘಟನೆ ಮುಂಬೈ ನಲ್ಲಿ ನಡೆದಿದೆ.

ಗೋವಂದಿ ಈಸ್ಟ್ ನಲ್ಲಿ ಈಘಟನೆ ನಡೆದಿದ್ದು, ಸಲೀಮ್ ಗೌಲಮ್ ಶೇಖ್ ಹತ್ಯೆಯಾಗಿರುವ ಕಾರು ಚಾಲಕನಾಗಿದ್ದಾನೆ. ಸಲೀಮ್ ಗೌಲಮ್ ಶೇಖ್ ಬೈಕ್ ನ್ನು ಓವರ್ ಟೇಕ್ ಮಾಡಬೇಕಾದರೆ ಬೈಕ್ ಗೆ ಕಾರು ತಗುಲಿದ್ದು ಶೇಖ್ ಹಾಗೂ ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದವರ ನಡುವೆ ವಾಗ್ವಾದ ಪ್ರಾರಂಭವಾಗಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಶೇಖ್ ನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಹಲ್ಲೆಗೊಳಗಾದ ಚಾಲಕನಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆತ ಬದುಕಿ ಉಳಿಯಲಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT