ಪುಣೆಯ ಭೀಮ ಶಂಕರ ದೇಗುಲದಲ್ಲಿ ಶಿವಲಿಂಗಕ್ಕೆ ವಿಶೇಷ ಅಭಿಷೇಕ 
ದೇಶ

ಮಹಾ ಶಿವರಾತ್ರಿ: ದೇಶಾದ್ಯಂತ ಶಿವನ ದೇಗುಲಗಳಲ್ಲಿ ವಿಶೇಷ ಪೂಜೆ!

ಮಹಾಶಿವರಾತ್ರಿ ನಿಮಿತ್ತ ಮಂಗಳವಾರ ಭಕ್ತರು ಶಿವನ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದು, ಶಿವನ ದೇಗುಲಗಳಲ್ಲಿ ಭಕ್ತರ ಸಾಗರವೇ ಹರಿದು ಬರುತ್ತಿದೆ.

ನವದೆಹಲಿ: ಮಹಾಶಿವರಾತ್ರಿ ನಿಮಿತ್ತ ಮಂಗಳವಾರ ಭಕ್ತರು ಶಿವನ ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದು, ಶಿವನ ದೇಗುಲಗಳಲ್ಲಿ ಭಕ್ತರ ಸಾಗರವೇ ಹರಿದು ಬರುತ್ತಿದೆ.
ದೇಶದ ಪ್ರಮುಖ ಶಿವನ ದೇಗುಲಗಳಾದ ಕೇದಾರನಾಥ, ಕಾಶಿ ವಿಶ್ವನಾಥ, ದಿಯೋಘಡ್ ನ ಬೈದ್ಯನಾಥ ದೇಗುಲ, ಓಂಕಾರೇಶ್ವರ ದೇಗುಲ, ಕುಲ್ದಾಬಾದ್ ನ ಗ್ರಿಶ್ನೇಶ್ವರ ದೇಗುಲ, ಸೋಮನಾಥೇಶ್ವರ ದೇಗುಲ, ಶ್ರೀಶೈಲಂನ  ಮಲ್ಲಿಕಾರ್ಜುನ ದೇಗುಲಗಳಲ್ಲಿ ಬೆಳಗಿನ ಜಾವದಿಂದಲೇ ವಿಶೇಷ ಅಭಿಷೇಕ ಮತ್ತು ಪೂಜೆ ನೆರವೇರಿಸಲಾಗುತ್ತಿದೆ. ಅಂತೆಯೇ ಮಧ್ಯ ಪ್ರದೇಶದ ಉಜ್ಜೈನ್ ಮಹಾಕಾಳೇಶ್ವರ ದೇಗುದಲ್ಲಿ ಭಸ್ಮಾರತಿ ಪೂಜೆ ನಡೆಸಲಾಗಿದ್ದು, ಪುಣೆಯ  ಭೀಮಶಂಕರ ದೇಗುಲ, ಮುಂಬೈನ ಬಬುಲ್ ನಾಥ್ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಸಲಾಗುತ್ತಿದೆ.
ಶಿವನ ಭಕ್ತರು ಸಾಲುಗಟ್ಟಿ ದೇಗಲುಗಳಲ್ಲಿ ಶಿವನ ದರ್ಶನಕ್ಕೆ ನಿಂತಿದ್ದು, ಹಲವು ದೇಗುಲಗಳಲ್ಲಿ ಭಕ್ತರಿಗೆ ವಿಶೇಷ ಪ್ರಸಾದ ವಿನಿಯೋಗ ಕೂಡ ಮಾಡಲಾಗುತ್ತಿದೆ. 
ಇನ್ನು ಕರ್ನಾಟಕದಲ್ಲೂ ಹಲವು ಶಿವನ ದೇಗುಲಗಳು ಬೆಳಗಿನಿಂದಲೇ ಭಕ್ತರಿಂದ ತುಂಬಿ ತುಳುಕುತ್ತಿದ್ದು, ಬೆಂಗಳೂರಿನ ಕಾಡು ಮಲ್ಲೇಶ್ವರ ದೇಗುಲ, ಗವಿಪುರಂ ಗವಿಗಂಗಾಧರೇಶ್ವರ ದೇಗುಲಗಳಲ್ಲಿ ಶಿವಲಿಂಗಕ್ಕೆ ವಿಶೇಷ ಅಲಂಕಾರ  ಮಾಡಲಾಗಿದೆ. ಅಂತೆಯೇ ಕರ್ನಾಟಕದ ಪ್ರಸಿದ್ಧ ಕೋಟಿ ಲಿಂಗೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ನಡೆಸಲಾಗುತ್ತಿದ್ದು, ಬೆಳಗಿನಂದಲೇ ಸಾವಿರಾರು ಭಕ್ತರು ಇಲ್ಲಿಗೆ ಆಗಮಿಸಿ ಶಿವನ ದರ್ಶನ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT