ಕರಣ್ ನಗರ ಜನವಸತಿ ಪ್ರದೇಶದಲ್ಲಿ ಉಗ್ರರ ದಾಳಿ 
ದೇಶ

ಕರಣ್ ನಗರ ಎನ್ ಕೌಂಟರ್; ಓರ್ವ ಉಗ್ರನ ಹತ್ಯೆಗೈದ ಸೇನೆ, ಮುಂದುವರಿದ ಕಾರ್ಯಾಚರಣೆ

ಜಮ್ಮುವಿನ ಕರಣ್ ನಗರ ಜನವಸತಿ ಪ್ರದೇಶದಲ್ಲಿ ಅವಿತಿರುವ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದ್ದು, ಉಳಿದ ಓರ್ವ ಉಗ್ರನ ವಿರುದ್ಧ ಎನ್ ಕೌಂಟರ್ ನಡೆಸಲಾಗುತ್ತಿದೆ.

ಶ್ರೀನಗರ: ಜಮ್ಮುವಿನ ಕರಣ್ ನಗರ ಜನವಸತಿ ಪ್ರದೇಶದಲ್ಲಿ ಅವಿತಿರುವ ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದ್ದು, ಉಳಿದ ಓರ್ವ ಉಗ್ರನ ವಿರುದ್ಧ  ಎನ್ ಕೌಂಟರ್ ನಡೆಸಲಾಗುತ್ತಿದೆ.
ಸೇನಾ ಮೂಲಗಳು ತಿಳಿಸಿರುವಂತೆ ನಿನ್ನೆ ರಾತ್ರಿ ಜಮ್ಮುವಿನ ಕರಣ್ ನಗರದ ಬಳಿ ಇರುವ ಸೇನಾ ಶಿಬಿರದೊಳಗೆ ನುಸುಳ ಉಗ್ರರು ಪ್ರಯತ್ನಿಸಿದ್ದು, ಉಗ್ರರ ಪ್ರಯತ್ನವನ್ನು ಸೇನಾಪಡೆಗಳು ವಿಫಲಗೊಳಿಸಿವೆ. ಈ ವೇಳೆ  ತಪ್ಪಿಸಿಕೊಳ್ಳುವ ಸಲುವಾಗಿ ಉಗ್ರರು ಕರಣ್ ನಗರದ ಜನವಸತಿ ಪ್ರದೇಶದಲ್ಲಿನ ಮನೆಯೊಳಗೆ ನುಸುಳಿದ್ದು, ಅವಿತಿರುವ ಉಗ್ರರಿಗಾಗಿ ಕಳೆದ 24 ಗಂಟೆಯಿಂದ ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇತ್ತೀಚೆಗೆ ಬಂದ ವರದಿಗಳ ಅನ್ವಯ ಪ್ರಸ್ತುತ ಕಾರ್ಯಾಚರಣೆ ನಡೆಸುತ್ತಿರುವ ಸೇನಾಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಕಟ್ಟಡದಲ್ಲಿ ಅವಿತಿರುವ ಮತ್ತೋರ್ವ ಉಗ್ರನಿಗಾಗಿ ಕಾರ್ಯಾಚರಣೆ ಮುಂದುವರೆದಿದೆ.
ಇನ್ನು ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿರುವ ಜಮ್ಮು ಪೊಲೀಸ್ ವರಿಷ್ಠಾಧಿಕಾರಿ ಸ್ವಯಂ ಪ್ರಕಾಶ್ ಪಾಣಿ ಅವರು ಕಟ್ಟಡದೊಳಗೆ ನುಸುಳಿದ್ದ ಇಬ್ಬರು ಉಗ್ರರ  ಪೈಕಿ ಓರ್ವ ಉಗ್ರನನ್ನು ಕೊಂದು ಹಾಕಲಾಗಿದೆ. ಕಾರ್ಯಾಚರಣೆ  ನಿರ್ಣಾಯಕ ಹಂತದಲ್ಲಿದ್ದು ಉಳಿದ ಉಗ್ರನ ವಿರುದ್ಧದ ಎನ್ ಕೌಂಟರ್ ಪ್ರಗತಿಯಲ್ಲಿದೆ. ಶೀಘ್ರ ಕಾರ್ಯಾಚರಣೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಮಾಹಿತಿ ನೀಡಿದ್ದಾರೆ.
ಕರಣ್ ನಗರದ ಸಮೀಪದಲ್ಲೇ ಸೇನೆಯ ಸಿಆರ್ ಪಿಎಫ್ ಸೇನಾ ಶಿಬಿರವಿದ್ದು, ಇದರೊಳಗೆ ನುಸುಳಿ ದಾಳಿ ಮಾಡಬೇಕು ಎನ್ನುವುದು ಉಗ್ರ ಯೋಜನೆಯಾಗಿತ್ತು. ಆದರೆ ಇದಕ್ಕೂ ಮೊದಲೇ ಸೇನಾಪಡೆಗಳನ್ನು ಉಗ್ರರನ್ನು  ಗುರುತಿಸುವ ಮೂಲಕ ಆಗಬಹುದಾಗಿದ್ದ ದೊಡ್ಡ ಅಪಾಯವನ್ನು ತಪ್ಪಿಸಿದ್ದಾರೆ. ಇನ್ನು ನಿನ್ನೆ ರಾತ್ರಿಯಿಂದಲೇ ಕಾರ್ಯಾಚರಣೆ ನಡೆಯುತ್ತಿದ್ದು, ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನಾಗಿದ್ದು, ಮತ್ತೋರ್ವ ಪೊಲೀಸ್  ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT