ಸಾಂದರ್ಭಿಕ ಚಿತ್ರ 
ದೇಶ

ಬಿಹಾರ: ರಾಜಧಾನಿ ಎಕ್ಸ್ ಪ್ರೆಸ್ ರೈಲು ಅಪಘಾತ ತಪ್ಪಿಸಿದ ರೈಲ್ವೆ ಸಿಬ್ಬಂದಿ

ಬಿಹಾರದ ಕಟಿಹಾರ್ ಜಿಲ್ಲೆಯಲ್ಲಿ ರೈಲು ಹಳಿ ತುಂಡಾಗಿರುವುದನ್ನು ರೈಲ್ವೆ ಸಿಬ್ಬಂದಿಯೊಬ್ಬರು ಲೋಕೋ ಪೈಲಟ್ ಗಮನಕ್ಕೆ ತರುವ ಮೂಲಕ....

ಕಟಿಹಾರ್: ಬಿಹಾರದ ಕಟಿಹಾರ್ ಜಿಲ್ಲೆಯಲ್ಲಿ ರೈಲು ಹಳಿ ತುಂಡಾಗಿರುವುದನ್ನು ರೈಲ್ವೆ ಸಿಬ್ಬಂದಿಯೊಬ್ಬರು ಲೋಕೋ ಪೈಲಟ್ ಗಮನಕ್ಕೆ ತರುವ ಮೂಲಕ ಮಂಗಳವಾರ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿಸಿದ್ದಾರೆ.
ಪೂರ್ವ ಮಧ್ಯ ರೈಲ್ವೆಯ ವಕ್ತಾರ ರಾಜೇಶ್ ಕುಮಾರ್ ಅವರ ಪ್ರಕಾರ, ನವದೆಹಲಿ- ದಿಬ್ರುಗಢ ರಾಜಧಾನಿ ಎಕ್ಸ್ ಪ್ರೆಸ್ ರೈಲು ಆಗಮಿಸುವ ಕೆಲವೇ ನಿಮಿಷಗಳ ಮುನ್ನ ರೈಲ್ವೆ ಸಿಬ್ಬಂದಿ ಶಿವಾನಂದನ್ ಅವರು ಕಟಿಹಾರ್ ಜಿಲ್ಲೆಯ ಮನ್ಸಿ-ಮಹೇಶ್ ಖುಂಟ್ ಬಳಿ ರೈಲು ಹಳಿ ತುಂಡಾಗಿರುವುದನ್ನು ಗಮನಸಿದ್ದಾರೆ. ಕೂಡಲೇ ಹಳಿ ಮೇಲೆ ಡಿಟೋನೇಟರ್ ಇರಿಸಿ, ರೈಲು ನಿಲ್ಲಿಸುವ ಫ್ಲ್ಯಾಗ್ ನೊಂದಿಗೆ ಓಡಿದ್ದಾರೆ.
ಕೆಂಪು ಬ್ಯಾನರ್ ನ ಫ್ಲ್ಯಾಗ್ ನೋಡಿದ ರಾಜಧಾನಿ ಎಕ್ಸ್ ಪ್ರೆಸ್ ರೈಲಿನ ಚಾಲಕ ತಕ್ಷಣವೇ ರೈಲು ನಿಲ್ಲಿಸುವ ಮೂಲಕ ದೊಡ್ಡ ಅನಾಹುತ ತಪ್ಪಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಹಳಿ ದುರಸ್ಥಿ ಕಾರ್ಯ ನಡೆದಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT