ನವದೆಹಲಿ: ದೆಹಲಿಯ ವಿಶೇಷ ಪೊಲೀಸ್ ಪಡೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಇಂಡಿಯನ್ ಮುಜಾಹಿದ್ದೀನ್(ಐಎಂ) ಭಯೋತ್ಪಾದಕನೊಬ್ಬನನ್ನು ಬಂಧಿಸಿದೆ.
ನೇಪಾಳ ಗಡಿಯಲ್ಲಿ ಭಯೋತ್ಪಾದಕನನ್ನು ಬಂಧಿಸಲಾಗಿದ್ದು, 2008 ರಲ್ಲಿ ಬಾಟ್ಲಾ ಎನ್ ಕೌಂಟರ್ ಪ್ರಕರಣದಿಂದಲೂ ಆತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದರು. ಪೊಲೀಸ್ ಅಧಿಕಾರಿಗಳ ಮಾಹಿತಿಯ ಪ್ರಕಾರ ಬಂಧಿತ ಭಯೋತ್ಪಾದಕ ಅರೀಜ್ ಖಾನ್ ಅಲಿಯಾಸ್ ಜುನೈದ್ ಬಾಂಬ್ ತಯಾರಿಕೆಯಲ್ಲಿ ಪರಿಣತನಾಗಿದ್ದು, ದೆಹಲಿ, ಜೈಪುರ, ಅಹ್ಮದಾಬಾದ್ ಹಾಗೂ ಉತ್ತರ ಪ್ರದೇಶದ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದಾನೆ.
ಉತ್ತರಾಖಂಡ್ ನ ನೇಪಾಳ ಗಡಿಯಲ್ಲಿ ಆತನನ್ನು ಬಂಧಿಸಲಾಗಿದ್ದು, ಖಾನ್ ಶಾಮೀಲಾಗಿರುವ ಬಾಂಬ್ ಸ್ಫೋಟ ಪ್ರಕರಣದಲ್ಲಿ 165 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.