ದೇಶ

ಕಾಂಗ್ರೆಸ್ ನೀರವ್ ಮೋದಿಯನ್ನು 'ಛೋಟಾ ಮೋದಿ' ಎಂದು ಕರೆದಿರುವುದು ಸರಿಯಲ್ಲ: ರವಿಶಂಕರ್ ಪ್ರಸಾದ್

11 ಸಾವಿರ ಕೋಟಿ ರುಪಾಯಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ರೂವಾರಿ ನೀರವ್ ಮೋದಿಯನ್ನು ಕಾಂಗ್ರೆಸ್ 'ಛೋಟಾ ಮೋದಿ' ಎಂದು...

ನವದೆಹಲಿ: 11 ಸಾವಿರ ಕೋಟಿ ರುಪಾಯಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ರೂವಾರಿ ನೀರವ್ ಮೋದಿಯನ್ನು ಕಾಂಗ್ರೆಸ್ 'ಛೋಟಾ ಮೋದಿ' ಎಂದು ಕರೆದಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. 
ಕಾಂಗ್ರೆಸ್ ಛೋಟಾ ಮೋದಿ ಎಂಬಂತಹ ಪದಗಳನ್ನು ಬಳಸುತ್ತಿರುವುದು ಸ್ವೀಕಾರಾರ್ಹವಲ್ಲ. ಇಂತಹ ಪದಗಳನ್ನು ಬಳಸಿದವರ ವಿರುದ್ಧ ಬಿಜೆಪಿ ಕಠಿಣ ಕ್ರಮಕೈಗೊಳ್ಳುತ್ತದೆ ಹಾಗೂ ಇದು ಅವಹೇಳನಕಾರಿ ಎಂದು ರವಿಶಂಕರ್ ಪ್ರಸಾದ್ ಹೇಳಿದ್ದಾರೆ. 
ಕಾಂಗ್ರೆಸ್ ನಾಯಕರ ಹಲವು ಚಿತ್ರೀಣಗಳು ನಮ್ಮ ಬಳಿ ಇವೆ. ಆದರೆ ನಾವು ಕೆಳ ಮಟ್ಟಕ್ಕೆ ಇಳಿಯಲು ಬಯಸುವುದಿಲ್ಲ. ಛೋಟಾ ಮೋದಿ ಎಂದರೆ ಏನು? ದೇಶದಲ್ಲಿ ಆ ಉಪನಾಮದಿಂದ ಬಹಳಷ್ಟು ಜನರಿದ್ದಾರೆ. 
ನಿರಾವ್ ಮೋದಿ ಅವರ 13 ಸಾವಿರ ಕೋಟಿ ರುಪಾಯಿ ಮೌಲ್ಯದ ಆಸ್ತಿ ಇದೆ. ಅವರ ಪಾಸ್ ಪೋರ್ಟ್ ಹಿಂತೆಗೆದುಕೊಳ್ಳಬೇಕು. ಕಾಂಗ್ರೆಸ್ ಫೋಟೋ ರಾಜಕೀಯ ನಿಲ್ಲಿಸಬೇಕು ಎಂದರು. 
ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಒಕ್ಕೂಟದ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿರಾವ್ ಮೋದಿ ಅವರನ್ನು ಭೇಟಿ ಮಾಡಿರಲಿಲ್ಲ. ನಿರಾವ್ ಮೋದಿ ಅವರು ದಾವೋಸ್ಗೆ ಹೋಗಿದಿದ್ದು ಅವರ ಸ್ವಂತ ಉದ್ದೇಶಕ್ಕಾಗಿ ಅಷ್ಟೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT