ಹತ್ಯೆಯಾಗೀಡಾಗಿದ್ದ ಟೆಕ್ಕಿ 
ದೇಶ

ಕೋರ್ಟ್ ಗಳು ಕೋಮು ಪಕ್ಷಪಾತದ ಅಭಿಪ್ರಾಯ ನೀಡುವಂತಿಲ್ಲ: ಸುಪ್ರೀಂ ಕೋರ್ಟ್

2014 ರಲ್ಲಿ ಪುಣೆಯಲ್ಲಿ ನಡೆದಿದ್ದ ಶೇಖ್ ಮೊಹ್ಸಿನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಹೈಕೋರ್ಟ್ ನ್ನು ಟೀಕಿಸಿರುವ ಸುಪ್ರೀಂ ಕೋರ್ಟ್ ಕೋರ್ಟ್ ಕೋಮು ಪಕ್ಷಪಾತದ ಅಭಿಪ್ರಾಯ ನೀಡುವಂತಿಲ್ಲ

ನವದೆಹಲಿ: 2014 ರಲ್ಲಿ ಪುಣೆಯಲ್ಲಿ ನಡೆದಿದ್ದ ಶೇಖ್ ಮೊಹ್ಸಿನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಹೈಕೋರ್ಟ್ ನ್ನು ಟೀಕಿಸಿರುವ ಸುಪ್ರೀಂ ಕೋರ್ಟ್ ಕೋರ್ಟ್ ಕೋಮು ಪಕ್ಷಪಾತದ ಅಭಿಪ್ರಾಯ ನೀಡುವಂತಿಲ್ಲ ಎಂದು ಹೇಳಿದೆ. 
ನಿರ್ದಿಷ್ಟ ಕೋಮಿನ ಪರವಾಗಿ ಅಥವಾ ವಿರುದ್ಧವಾದ ಅಭಿಪ್ರಾಯಗಳನ್ನು ಕೋರ್ಟ್ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದ್ದ ಮುಂಬೈ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. 
ನ್ಯಾ.ಎಸ್ಎ ಬೋಬ್ಡೆ ಹಾಗೂ ಎಲ್ ನಾಗೇಶ್ವರ ರಾವ್ ಅವರ ಪೀಠ ಹೈಕೋರ್ಟ್ ಆರೋಪಿಗಳಿಗೆ ನೀಡಿದ್ದ ಜಾಮೀನು ಆದೇಶವನ್ನು ರದ್ದುಗೊಳಿಸಿದ್ದು, ಹತ್ಯೆಯಾಗಿರುವ ವ್ಯಕ್ತಿಯ ತಪ್ಪೆಂದರೆ ಆತ ಅನ್ಯ ಧರ್ಮಕ್ಕೆ ಸೇರಿದವನಾಗಿದ್ದು ಎಂದು ಹೈಕೋರ್ಟ್ ಏಕೆ ಹೇಳಿತ್ತು ಎಂಬುದು ಅರ್ಥವಾಗುತ್ತಿಲ್ಲ ಎಂದು ಹೇಳಿದೆ. 
ಹೈಕೋರ್ಟ್ ನ ಹೇಳಿಕೆಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್ ಬಹುಶಃ ಆ ಹತ್ಯೆ ಪ್ರಕರಣದಲ್ಲಿ ವ್ಯಕ್ತಿಯನ್ನು ಕೊಲೆ ಮಾಡುವುದಕ್ಕೆ ವೈಯಕ್ತಿಕ ವೈರತ್ವ ಇರಲಿಲ್ಲ ಎಂಬುದನ್ನು ಹೇಳುವುದಕ್ಕಾಗಿ ಹೈಕೋರ್ಟ್ ನ್ಯಾಯಾಧೀಶರು ಆ ರೀತಿಯ ಹೇಳಿಕೆ ನೀಡಿದ್ದರು. ನಿರ್ದಿಷ್ಟ ಸಮುದಾಯಕ್ಕೆ ನೋವುಂಟು ಮಾಡುವ ಉದ್ದೇಶದಿಂದ ಕೋರ್ಟ್ ಹಾಗೆ ಹೇಳಿರಲು ಸಾಧ್ಯವಿಲ್ಲ, ಆದರೂ ಕೋರ್ಟ್ ಗಳು ಕೋಮು ಪಕ್ಷಪಾತದ ಅಭಿಪ್ರಾಯ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT