ಉತ್ತರ ಪ್ರದೇಶ ವಿಧಾನಸಭೆ 
ದೇಶ

ಉತ್ತರ ಪ್ರದೇಶ ಬಜೆಟ್: ಮೂಲ ಸೌಕರ್ಯ, ರೈತರಿಗೆ, ಧಾರ್ಮಿಕ ಪ್ರವಾಸೋದ್ಯಮಕ್ಕೆ ಯೋಗಿ ಆದ್ಯತೆ

ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಶುಕ್ರವಾರ ಮಂಡನೆಯಾಗಿದ್ದು, ಮೂಲಭೂತ ಸೌಕರ್ಯ...

ಲಖನೌ: ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಶುಕ್ರವಾರ ಮಂಡನೆಯಾಗಿದ್ದು, ಮೂಲಭೂತ ಸೌಕರ್ಯ, ರೈತರಿಗೆ ಹಾಗೂ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಹಣಕಾಸು ಸಚಿವ ರಾಜೇಶ್ ಅಗರವಾಲ್ ಅವರು ಇಂದು 2018-19ನೇ ಸಾಲಿನ ಬಜೆಟ್ ಮಂಡಿಸಿದರು. 
ಉತ್ತರ ಪ್ರದೇಶ ಸರ್ಕಾರ ಒಟ್ಟು 4.28 ಲಕ್ಷ ಕೋಟಿ ರುಪಾಯಿ ಬಜೆಟ್ ನಲ್ಲಿ 14, 341 ಕೋಟಿ ರುಪಾಯಿ ಹೊಸ ಯೋಜನೆಗಳಿಗೆ ಮೀಸಲಿಟ್ಟಿದ್ದು, ರಾಜ್ಯದಲ್ಲಿ ಹೊಸ ರಸ್ತೆಗಳ ನಿರ್ಮಾಣಕ್ಕೆ 11,300 ಕೋಟಿ ರುಪಾಯಿ ನೀಡಲಾಗಿದೆ.
ಮದರಸಾಗಳ ಆಧುನಿಕರಣಕ್ಕಾಗಿ ಅಗರವಾಲ್ ಅವರು ಬಜೆಟ್ ನಲ್ಲಿ 404 ಕೋಟಿ ಅನುದಾನ ಘೋಷಿಸಿದ್ದಾರೆ.
ಇದು ಸಮಗ್ರ ಅಭಿವೃದ್ಧಿ ಬಜೆಟ್ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. ಆದರೆ ಯಾವುದೇ ಗೊತ್ತು ಗುರಿ ಇಲ್ಲದ. ರೈತ ವಿರೋಧಿ ಮತ್ತು ಬಡವರ ವಿರೋಧಿ ಬಜೆಟ್ ಎಂದು ಪ್ರತಿಪಕ್ಷಗಳು ಆರೋಪಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT