5 ದಿನಗಳ ನ್ಯಾಯಾಂಗ ಬಂಧನಕ್ಕೆ ಹಿಂದೂ ಸಂಹಾತಿ ಮುಖ್ಯಸ್ಥ 
ದೇಶ

5 ದಿನಗಳ ನ್ಯಾಯಾಂಗ ಬಂಧನಕ್ಕೆ ಹಿಂದೂ ಸಂಹಾತಿ ಮುಖ್ಯಸ್ಥ

ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿರುವ ಆರೋಪದಡಿ ಹಿಂದೂ ಸಂಹಾತಿ ಮುಖ್ಯಸ್ಥರೂ ಸೇರಿದಂತೆ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹಲವರಿಗೆ 5 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕೋಲ್ಕತ್ತಾ: ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿರುವ ಆರೋಪದಡಿ ಹಿಂದೂ ಸಂಹಾತಿ ಮುಖ್ಯಸ್ಥರೂ ಸೇರಿದಂತೆ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಹಲವರಿಗೆ 5 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 
ಸೆಕ್ಷನ್ 307 ರ ಅಡಿಯಲ್ಲಿ ಕೊಲೆ ಯತ್ನದ ಆರೋಪ, ಸೆಕ್ಷನ್ 326 ರ ಅಡಿಯಲ್ಲಿ ಹಲ್ಲೆ ನಡೆಸಿದ ಆರೋಪ ಸೆಕ್ಷನ್ 427 ರ ಅಡಿಯಲ್ಲಿ ಆಸ್ತಿ ಹಾನಿ ಉಂಟು ಮಾಡಿದ ಆರೋಪವನ್ನು ಹೊರಿಸಲಾಗಿದ್ದು, ಹಿಂದೂ ಸಂಹಾತಿ ಮುಖ್ಯಸ್ಥರೂ ಸೇರಿದಂತೆ ಆರೋಪಿಗಳು ಫೆ.,15-17 ರ ವರೆಗೆ ಪೊಲೀಸ್ ವಶದಲ್ಲಿದ್ದರು. 
ಬಂಧಿತ ಆರೋಪಿಗಳನ್ನು ಸೆಷನ್ಸ್ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು. ಫೆ.22 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿರುವ ಕೋರ್ಟ್ ಅದೇ ದಿನಕ್ಕೆ ವಿಚಾರಣೆಯನ್ನು ಮುಂದೂಡಿದೆ. 
ಮುಸ್ಲಿಮ್ ಸಮುದಾಯದ ಕೆಲವರನ್ನು ಘರ್ ವಾಪಸಿ ಮಾಡುತ್ತಿದ್ದಾಗ ಪ್ರಶ್ನೆ ಕೇಳಿದ್ದ ಮಾಧ್ಯಮದವರ ಮೇಲೆ ಹಿಂದೂ ಸಂಹಾತಿ ಮುಖಂಡರು ಹಲ್ಲೆ ನಡೆಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ': ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆ

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ನಮ್ಮ ತಾಳ್ಮೆಯ ಮಿತಿ ಮೀರಿದೆ, ಬಹಿರಂಗ ಯುದ್ಧ ಆರಂಭ: ಅಫ್ಘಾನ್ ಮಿಲಿಟರಿ ದಾಳಿಗೆ ಪಾಕ್‌ನಿಂದ ಪ್ರತ್ಯುತ್ತರ

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಮಂತ್ರಾಲಯದಿಂದ ಹಿಂದಿರುಗುತ್ತಿದ್ದ ಕುಣಿಗಲ್ ನಿವಾಸಿಗಳ ದಾರುಣ ಸಾವು

ಸಿರಿವಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ: 21 ಕೋಟಿಯಷ್ಟು ಹಣ ಮೃತಪಟ್ಟವರ ಖಾತೆಗೆ ಹೋಗಿದೆ; ಡಿಕೆ ಶಿವಕುಮಾರ್

SCROLL FOR NEXT