ದೇಶ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ: ಯುಪಿಎ ವಿರುದ್ಧ ಬಿಜೆಪಿ ಆರೋಪ

Nagaraja AB

ನವದೆಹಲಿ: ಮುಂಬೈಯಲ್ಲಿನ ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿನ 11.300 ಕೋಟಿ ರೂ. ಹಗರಣ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಿನ ರಾಜಕೀಯ ಕೆಸರೆರಾಟಕ್ಕೂ ಕಾರಣವಾಗಿದೆ.

 ಯುಪಿಎ ಸರ್ಕಾರದ ಅವಧಿಯಲ್ಲೂ ಈ ಹಗರಣ ನಡೆದಿತ್ತು ಎಂದು ರಕ್ಷಣಾ ಸಚಿವೆ ನಿರ್ಮಾಲಾ ಸೀತಾರಾಮನ್ ಆರೋಪಿಸಿದ್ದಾರೆ.

ನವದೆಹಲಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಈ ಹಗರಣ ಸಂಬಂಧ ಪ್ರತಿಪಕ್ಷಗಳು ಸುಳ್ಳು ಸುದ್ದಿ ಹರಡಿಸುತ್ತಿದ್ದಾರೆ ಎಂದು ಅವರು ಅಪಾದಿಸಿದರು.ವಿದೇಶದಲ್ಲಿ ತಲೆಮರೆಸಿಕೊಂಡಿರುವ ಈ ಹಗರಣದ ಪ್ರಮುಖ ಆರೋಪಿ ನೀರವ್ ಮೋದಿ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ನೀರವ್ ಮೋದಿ ದೇಶದಿಂದ ಪಲಾಯನ ಮಾಡಲು ಸರ್ಕಾರ ನೆರವು ನೀಡಿಲ್ಲ. ಶೀಘ್ರದಲ್ಲಿಯೇ ಆತನನ್ನು ಬಂಧಿಸಿ ದೇಶಕ್ಕೆ ಕರೆತರಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

SCROLL FOR NEXT