ಸಂಗ್ರಹ ಚಿತ್ರ 
ದೇಶ

ಪಿಎನ್‏ಬಿ ವಂಚನೆ ಪ್ರಕರಣ: ಬ್ಯಾಂಕ್ ಮಾಜಿ ಡೆಪ್ಯೂಟಿ ಮ್ಯಾನೇಜರ್ ಸೇರಿ ಮೂವರನ್ನು ಬಂಧಿಸಿದ ಸಿಬಿಐ

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್'ನ ಮಾಜಿ ಡಿಜಿಎಂ ಗೋಕುಲ್ ನಾಥ್ ಶೆಟ್ಟಿ ಸೇರಿದಂತೆ ಮೂವರನ್ನು ಸಿಬಿಐ ಶನಿವಾರ ಬಂಧನಕ್ಕೊಳಪಡಿಸಿದೆ...

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್'ನ ಮಾಜಿ ಡಿಜಿಎಂ ಗೋಕುಲ್ ನಾಥ್ ಶೆಟ್ಟಿ ಸೇರಿದಂತೆ ಮೂವರನ್ನು ಸಿಬಿಐ ಅಧಿಕಾರಿಗಳ ತಂಡ ಶನಿವಾರ ಬಂಧನಕ್ಕೊಳಪಡಿಸಿದೆ. 
ಗೋಕುಲ್ ನಾಥ್ ಶೆಟ್ಟಿ ಜೊತೆಗೆ ಪಂಜಾಬ್ ನ್ಯಾಷನಲ್ ಬ್ಯಾಂಕ್'ನ ಮನೋಜ್ ಕಾರತ್ ಹಾಗೂ ನೀರವ್ ಮೋದಿ ಗ್ರೂಪ್ ಆಫ್ ಫರ್ಮ್ಸ್'ನ ಹೇಮತ್ ಭಟ್ ಎಂಬುವವರನ್ನೂ ಸಿಬಿಐ ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದು, ಮುಂಬೈನ ಸಿಬಿಐ ವಿಶೇಷ ನ್ಯಾಯಾಲಯದ ಎದುರು ಮೂವರನ್ನು ಶನಿವಾರ ಹಾಜರುಪಡಿಸಲಿದ್ದಾರೆಂದು ತಿಳಿದುಬಂದಿದೆ. 
ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೀರವ್ ಮೋದಿ ಹಾಗೂ ಮೆಹುಲ್ ಚೋಕ್ಸಿ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಪ್ರಕರಣ ಸಂಬಂಧ ಬ್ಯಾಂಕ್'ನ ಮಾಜಿ ಡಿಜಿಎಂ ಗೋಕುಲ್ ನಾಥ್ ಶೆಟ್ಟಿಯ ಮಲಾಡ್ ನಲ್ಲಿರುವ ಮನೆಗೆ ನಿನ್ನೆಯಷ್ಟೇ ಸಿಬಿಐ ಅಧಿಕಾರಿಗಳು ಭೇಟಿ ನೀಡಿದ್ದರು. ಈ ವೇಳೆ ಗೋಕುಲ್ ಅವರು ಅಧಿಕಾರಿಗಳಿಗೆ ಸಿಕ್ಕಿರಲಿಲ್ಲ. ದಾಳಿ ಸಂದರ್ಭ ಜಾರಿ ನಿರ್ದೇಶನಾಲಯವು ರೂ.5,100 ಕೋಟಿ ಮೌಲ್ಯದ ಚಿನ್ನ ಹಾಗೂ ವಜ್ರಗಳನ್ನು ವಶಪಡಿಸಿಕೊಂಡಿತ್ತು. ಪ್ರಕರಣ ವಿಚಾರಣೆಗಳು ಹಾಗೂ ತನಿಖೆಗಳು ಮುಂದುವರೆದಿವೆ ಎಂದು ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT