ಸಂಗ್ರಹ ಚಿತ್ರ 
ದೇಶ

ಸುಂಜುವಾನ್ ದಾಳಿ: 7 ತಿಂಗಳ ಹಿಂದೆಯೇ ಪಾಕ್'ನಿಂದ ಭಾರತಕ್ಕೆ ಬಂದಿದ್ದ ಉಗ್ರರು

ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಪಾಕಿಸ್ತಾನದಿಂದ 7 ತಿಂಗಳ ಹಿಂದೆಯೇ ಭಾರತಕ್ಕೆ ಬಂದಿದ್ದರು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ...

ನವದೆಹಲಿ: ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಭಯೋತ್ಪಾದಕರು ಪಾಕಿಸ್ತಾನದಿಂದ 7 ತಿಂಗಳ ಹಿಂದೆಯೇ ಭಾರತಕ್ಕೆ ಬಂದಿದ್ದರು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ. 
ಸುಂಜುವಾನ್ ದಾಳಿ ಕುರಿತಂತೆ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಇದೀಗ ಪ್ರಾಥಮಿಕ ವರದಿಯನ್ನು ಸಿದ್ಧಪಡಿಸಿದ್ದು, ವರದಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗಗಳಲ್ಲಿ ಅವಿತುಕೊಂಡು ದಾಳಿ ನಡೆಸಿದ್ದ ಮೂವರು ಉಗ್ರರು 7 ತಿಂಗಳ ಹಿಂದೆಯೇ ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದರು. ಬಳಿಕ ದಾಳಿ ನಡೆಸಲು ಸಂಚು ರೂಪಿಸುತ್ತಿದ್ದರು ಎಂದು ತಿಳಿಸಿದೆ ಎಂದು ಸೇನಾ ಮೂಲಗಳು ಮಾಹಿತಿ ನೀಡಿವೆ. 
ಸುಂಜುವಾನ್ ಸೇನಾ ಕ್ಯಾಂಪ್ ಮೇಲೆ ಫೆ.10 ರಂದು ಉಗ್ರರು ದಾಳಿ ನಡೆಸಿದ್ದರು. ದಾಳಿಯಲ್ಲಿ 6 ಯೋಧರು ಹುತಾತ್ಮರಾಗಿದ್ದರು. ಅಲ್ಲದೆ, ಓರ್ವ ನಾಗರೀಕ ಸಾವನ್ನಪ್ಪಿ, ಹಲವರಿಗೆ ಗಂಭೀರ ಗಾಯಗಳಾಗಿದ್ದವು. 
ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆ ಹೊತ್ತುಕೊಂಡಿತ್ತು. 
ಕಳೆದ ವರ್ಷ ಜೂನ್ ತಿಂಗಳಿನಲ್ಲಿ ಪಾಕಿಸ್ತಾನದ ಗಡಿ ದಾಟಿದ್ದ ಉಗ್ರರು ಭಾರತದ ಪ್ರವೇಶಿಸಿದ್ದರು ಎಂದು ಮೂಲಗಳು ತಿಳಿಸಿವೆ. 
ದಾಳಿ ಕುರಿತಂತೆ ಅಧಿಕಾರಿಗಳು ಆಳವಾಗಿ ತನಿಖೆ ನಡೆಸುತ್ತಿದ್ದು, ವರದಿ ಸಿದ್ಧಪಡಿಸಿದ ಬಳಿಕ ಸೇನಾಧಿಕಾರಿಗಳು ವರದಿಯನ್ನು ಪರಿಶೀಲನೆ ನಡೆಸುತ್ತಾರೆ. ಇಂತಹ ದಾಳಿಗಳು ಮರುಕಳಿಸದಂತೆ ಕೂಡಲೇ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಭದ್ರತಾ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗಿದ್ದು, ಗಡಿಯಲ್ಲಿ ಪಾಕಿಸ್ತಾನ ಉದ್ಧಟತನ ಪ್ರದರ್ಶಿಸಿದರೆ, ದಿಟ್ಟ ಉತ್ತರ ನೀಡುವಂತೆ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT