ಕೇಂದ್ರ ಸಚಿವೆ ಮನೇಕಾ ಗಾಂಧಿ 
ದೇಶ

ಭ್ರಷ್ಟಾಚಾರ ಆರೋಪ ಹೊತ್ತ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಮನೇಕಾ ಗಾಂಧಿ: ವಿಡಿಯೋ ವೈರಲ್

ಭ್ರಷ್ಟಾಚಾರ ಆರೋಪ ಹೊತ್ತಿರುವ ಅಧಿಕಾರಿಯೊಬ್ಬರನ್ನು ಕೇಂದ್ರ ಸಚಿವೆ ಮನೇಕಾ ಗಾಂಧಿಯವರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ...

ಬರೇಲಿ: ಭ್ರಷ್ಟಾಚಾರ ಆರೋಪ ಹೊತ್ತಿರುವ ಅಧಿಕಾರಿಯೊಬ್ಬರನ್ನು ಕೇಂದ್ರ ಸಚಿವೆ ಮನೇಕಾ ಗಾಂಧಿಯವರು ಹಿಗ್ಗಾ ಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. 
ಉತ್ತರಪ್ರದೇಶದ ಬರೇಲಿಯಲ್ಲಿ ಸಾರ್ವಜನಿಕ ಸಭೆಯನ್ನು ನಡೆಸುತ್ತಿದ್ದ ವೇಲೆ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಇದರಿಂದ ತೀವ್ರವಾಗಿ ಕೆಂಡಾಮಂಡಲಗೊಂಡಿರುವ ಮನೇಕಾ ಅವರು ಎಲ್ಲರ ಸಮ್ಮುಖದಲ್ಲಿಯೇ ಅಧಿಕಾರಿನ್ನು ತರಾಟೆಗೆ ತೆಗೆದೆಕೊಂಡಿದ್ದಾರೆ. 
ಉತ್ತರಪ್ರದೇಶದ ಬಹೇರಿಯಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಿದ್ದ ವೇಳೆ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿತ್ತು. ಇದರಿಂದ ಕೆಂಡಾಮಂಡಲರಾದ ಮೇನಕಾ ಎಲ್ಲರೆದುರೇ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಮನೇಕಾ ಅವರು, 2019ರ ಲೋಕಸಭಾ ಚುನಾವಣೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ್ದಾರೆ. 
ಉತ್ತಮ ಆಡಳಿತದ ಆಧಾರದ ಮೇಲೆ ಚುನಾವಣೆಯಲ್ಲಿ ಸ್ಪರ್ಧೆ ನಡೆಸಲಾಗುತ್ತದೆ. ಮೂರು ಪ್ರಮುಖ ವಲಯಗಳ ಮೇಲೆ ಗಮನ ಹರಿಸಲಾಗಿದೆ. ಉತ್ತಮ ರಸ್ತೆಗಳು, ವಿದ್ಯುದೀಕರಣ ಮತ್ತು ಪ್ರತೀ ಮನೆಯಲ್ಲಿ ಶೌಚಾಲಯ ಸೌಲಭ್ಯ ಒದಗಿಸುವುದು ನನ್ನ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ಇದಲ್ಲದೆ, ಸಚಿವೆ ಮನೇಕಾ ಅವರು ಎಲ್ಲಾ ಮನೆಗಳಿಗೂ ವಿದ್ಯುತ್ ಸೌಲಭ್ಯ ನೀಡುವ ಗುರಿಯನ್ನು ಹೊಂದಿರುವ ಸೌಭಾಗ್ಯ ಯೋಜನೆ ಕುರಿತಂತೆಯೂ ಸಭೆಯಲ್ಲಿ ಮಾತನಾಡಿದ್ದಾರೆ. 
ಭ್ರಷ್ಟಾಚಾರ, ಅತ್ಯಾಚಾರ ಆರೋಪಿಗಳ ವಿರುದ್ಧ ಕಠಿಣ ಧೋರಣೆಯನ್ನು ಹೊಂದಿರುವ ಸಚಿವೆ ಮನೇಕಾ ಗಾಂಧಿವರು ಇತ್ತೀಚೆಗಷ್ಟೇ ಲೋಕಸಭೆಯಲ್ಲಿ ವೈವಾಹಿಕ ಅತ್ಯಾಚಾರವನ್ನು ಅಪರಾಧ ಪ್ರಕರಣವಾಗಿ ಪರಿಗಣಿಸುವಂತೆ ಆಗ್ರಹಿಸಿ ಸುದ್ದಿಗೆ ಗ್ರಾಸವಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್‌ ಯುದ್ಧಕ್ಕೆ ವಿರೋಧ: Hormuz ಬಂದ್ ಮಾಡಿದ್ರೆ ಜಾಗತಿಕ ವ್ಯಾಪಾರಕ್ಕೆ ಮಾರಕ: ಪುಟಿನ್-ಕ್ಸಿ ಜಂಟಿ ಹೇಳಿಕೆ

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

IPL 2026: ಮತ್ತೆ ಮುಗ್ಗರಿಸಿದ MI, KKRಗೆ 4 ವಿಕೆಟ್ ಜಯ, ಮುಂದುವರೆದ ಪ್ಲೇಆಫ್ ಸಸ್ಪನ್ಸ್!

'ದೇವಸ್ಥಾನಗಳಲ್ಲಿ ಅವಮಾನ ಅನುಭವಿಸಿದ್ದೆ': ಇಸ್ಲಾಂಗೆ ಮತಾಂತರವಾದ ತಮಿಳು ನಟ ಜೈ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?

SCROLL FOR NEXT