ಬಿಜೆಪಿ ಸಂಸದೆ ಯಶೋಧರಾ ರಾಜೇ ಸಿಂಧಿಯಾ 
ದೇಶ

ಕಾಂಗ್ರೆಸ್'ಗೆ ಮತ ಹಾಕುವವರಿಗೆ 'ಉಜ್ವಲ ಯೋಜನೆ'ಗಳ ಪ್ರಯೋಜನವಿಲ್ಲ: ಬಿಜೆಪಿ ಸಂಸದೆ

ಪ್ರಧಾನಮಂತ್ರಿ ಉಜ್ವಲ ಯೋಜನೆ ಬಿಜೆಪಿಯ ಯೋಜನೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವವರಿಗೆ ಈ ಯೋಜನೆಯ ಪ್ರಯೋಜನಗಳು ಸಿಗುವುದಿಲ್ಲ ಎಂದು ಬಿಜೆಪಿ ಸಂಸದೆ ಯಶೋಧರಾ ರಾಜೇ ಸಿಂಧಿಯಾ ಅವರು ಭಾನುವಾರ ಹೇಳಿದ್ದಾರೆ...

ಶವಪುರಿ: ಪ್ರಧಾನಮಂತ್ರಿ ಉಜ್ವಲ ಯೋಜನೆ ಬಿಜೆಪಿಯ ಯೋಜನೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವವರಿಗೆ ಈ ಯೋಜನೆಯ ಪ್ರಯೋಜನಗಳು ಸಿಗುವುದಿಲ್ಲ ಎಂದು ಬಿಜೆಪಿ ಸಂಸದೆ ಯಶೋಧರಾ ರಾಜೇ ಸಿಂಧಿಯಾ ಅವರು ಭಾನುವಾರ ಹೇಳಿದ್ದಾರೆ. 
ಮಧ್ಯಪ್ರದೇಶದ ಸಾರ್ವಜನಿಕ ಕಾರ್ಯಕ್ರಮವೊದರಲ್ಲಿ ಮಾತನಾಡಿರುವ ಅವರು, ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ಪರಿಚಯಿಸಿದ್ದು ಬಿಜೆಪಿ. ಹೀಗಾಗಿ ಕಾಂಗ್ರೆಸ್'ಗೆ ಮತ ಹಾಕುವವರಿಗೆ ಈ ಯೋಜನೆಯ ಪ್ರತಿಫಲಗಳು ಸಿಗುವುದಿಲ್ಲ ಎಂದು ಹೇಳಿದ್ದಾರೆ. 
ಈವರೆಗೂ ನಿಮಗೆ ಗ್ಯಾಸ್ ಯೋಜನೆ ತಲುಪಿಲ್ಲವೇಕೆ? ಏಕೆಂದರೆ, ಇದು ಬಿಜೆಪಿಯ ಯೋಜನೆಯಾಗಿದೆ. ನೀವು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕಿದರೆ, ನಿಮಗೆ ಯೋಜನೆಯ ಪ್ರಯೋಜನಗಳು ಸಿಗುವುದಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ನೀವು ಮತ ಹಾಕುತ್ತಿದ್ದರೆ. ಕಾಂಗ್ರೆಸ್ ಮುಖಾಂತರವಾಗಿ ನಾವೇಕೆ ನಿಮಗೆ ಗ್ಯಾಸ್ ವಿತರಣೆ ಮಾಡಬೇಕು? ನಿಮಗೆ ನಾವು ಯೋಜನೆ ಪ್ರಯೋಜನೆಗಳನ್ನು ನೀಡುವುದಿಲ್ಲ. ಬಿಜೆಪಿಗೆ ಮತ ಹಾಕಿದಿರೆ, ನಿಮಗೆ ಯೋಜನೆಯ ಪ್ರಯೋಜನ ದೊರಕುವಂತೆ ಮಾಡುತ್ತೇವೆಂದು ತಿಳಿಸಿದ್ದಾರೆ. 
ಕಡುಬಡತನದಲ್ಲಿರುವ ಮಹಿಳೆಯಲ ಕಲ್ಯಾಣಕ್ಕಾಗಿ ಕೇಂದ್ರದ ಆಡಳಿತಾರೂಢ ಎನ್'ಡಿಎ ಸರ್ಕಾರ 2016ರಲ್ಲಿ ಪ್ರಧಾನಮಂತ್ರಿ ಉಜ್ವಲ ಯೋಜನ ಯೋಜನೆಯನ್ನು ಜಾರಿಗೆ ತಂದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT