ಸಾಂದರ್ಭಿಕ ಚಿತ್ರ 
ದೇಶ

ಅತ್ಯಾಚಾರ ಆರೋಪ: ಸುದ್ದಿ ವಾಹಿನಿಯ ಪ್ರಧಾನ ಸಂಪಾದಕರ ವಿರುದ್ಧ ಕೇಸು ದಾಖಲು

ಮಹಿಳಾ ಉದ್ಯೋಗಿಯೊಬ್ಬರನ್ನು ಅತ್ಯಾಚಾರವೆಸಗಿದ ಆರೋಪದ ಮೇಲೆ ದೆಹಲಿ ....

ನವದೆಹಲಿ: ಮಹಿಳಾ ಉದ್ಯೋಗಿಯೊಬ್ಬರನ್ನು ಅತ್ಯಾಚಾರವೆಸಗಿದ ಆರೋಪದ ಮೇಲೆ ದೆಹಲಿ ಪೊಲೀಸರು ನಿನ್ನೆ ಹಿಂದಿ ಸುದ್ದಿ ವಾಹಿನಿಯ ಪ್ರಧಾನ ಸಂಪಾದಕರನ್ನು ಬಂಧಿಸಿದ್ದಾರೆ.
ಫೆಬ್ರವರಿ 13ರಂದು ದೆಹಲಿಯ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ. ಸಂತ್ರಸ್ತೆ ತನ್ನ ದೂರಿನಲ್ಲಿ, 2016ರಲ್ಲಿ ಝೆನೆಟಿಕ್ಸ್ ಜಿಮ್ ನಲ್ಲಿ ಕೆಲಸ ಮಾಡುತ್ತಿದ್ದಾಗ ದೆಹಲಿಯ ಇಂದಿರಾಪುರಂನಲ್ಲಿ ವಾಸಿಸುತ್ತಿದ್ದೆ. ಆಗ ಉಮೇಶ್ ಕುಮಾರ್ ಅವರ ಪರಿಚಯವಾಯಿತು. ಕಳೆದ ವರ್ಷ ಜೂನ್ ನಲ್ಲಿ ತನ್ನ ನಿವಾಸಕ್ಕೆ ಉಮೇಶ್ ಕುಮಾರ್ ತನ್ನನ್ನು ಬರಲು ಹೇಳಿದರು. ಮದುವೆ ಮಾಡಿಕೊಳ್ಳುವ ನೆಪದಲ್ಲಿ ತಮ್ಮ ಜೊತೆ ದೈಹಿಕ ಸಂಬಂಧ ಬೆಳೆಸಿದರು. ನಂತರ ಆಗಸ್ಟ್ ತಿಂಗಳಲ್ಲಿ ಕ್ಲಾರಿಡ್ಜ್ ಹೊಟೇಲ್ ಗೆ ಕರೆದು ತನ್ನ ಮೇಲೆ ಲೈಂಗಿಕ ಅತ್ಯಾಚಾರ ನಡೆಸಿದರು. ನಂತರ ಉಮೇಶ್ ಅವರಿಗೆ ಮದುವೆಯಾಗಿರುವುದು ಗೊತ್ತಾಯಿತು ಎಂದು ತಿಳಿಸಿದ್ದಾರೆ.
ಉಮೇಶ್ ಅವರು ಹೊಟೇಲ್ ನಲ್ಲಿ ಸಂತ್ರಸ್ತೆ ಹೇಳಿದ ದಿನ ಕೋಣೆ ಬುಕ್ ಮಾಡಿದ್ದರು ಎಂದು ಹೊಟೇಲ್ ಸಿಬ್ಬಂದಿ ತಿಳಿಸಿದ್ದಾರೆ.
ಭಾರತೀಯ ದಂಡ ಸಂಹಿತೆ ಸೆಕ್ಷನ್ 376 ಮತ್ತು 506ರಡಿಯಲ್ಲಿ ಮತ್ತು ಕ್ರಿಮಿನಲ್ ಪ್ರಕ್ರಿಯೆ ಸೆಕ್ಷನ್ 164ರಡಿಯಲ್ಲಿ ಉಮೇಶ್ ಕುಮಾರ್ ವಿರುದ್ಧ ಕೇಸು ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT