ಶೀಲಾ ದೀಕ್ಷಿತ್-ಅಜಯ್ ಮಾಕನ್ 
ದೇಶ

ಅಜಯ್ ಮಾಕನ್ ಅವರ ಕಾರ್ಯಶೈಲಿಯಿಂದ ಕಾಂಗ್ರೆಸ್ ಗೆ ಹಾನಿ:ಶೀಲಾ ದೀಕ್ಷಿತ್

ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಾಕನ್ ಅವರ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿ....

ನವದೆಹಲಿ: ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ಮಾಕನ್ ಅವರ ವಿರುದ್ಧ ಹರಿಹಾಯ್ದಿರುವ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕಿ ಶೀಲಾ ದೀಕ್ಷಿತ್, ಅವರ ಕೆಲಸದ ಶೈಲಿಯಿಂದಾಗಿ ಪಕ್ಷಕ್ಕೆ ಸಾಕಷ್ಟು ಹಾನಿಯುಂಟಾಗಿದೆ ಎಂದು ಹೇಳಿದ್ದಾರೆ.
ಎಎನ್ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜಕೀಯ ಪಕ್ಷದ ಅಧ್ಯಕ್ಷರು ದಿನವಿಡೀ ಪಕ್ಷಕ್ಕಾಗಿ ದುಡಿಯಬೇಕು, ಎಲ್ಲರೊಂದಿಗೆ ಕುಳಿತು ಮಾತನಾಡಬೇಕು ಮತ್ತು ಎಲ್ಲವನ್ನೂ ತಿಳಿದುಕೊಂಡಿರಬೇಕು. ವಿಷಯವನ್ನು ಸರಿಪಡಿಸುವುದು ಅಗತ್ಯವಿದೆ ಎಂದು ಹೇಳಿದರೆ ಒಳ್ಳೆಯ ಸಂಗತಿ.ಅವರೇನು ಮಾಡುತ್ತಾರೆ ನೋಡೋಣ. ಅವರ ಕೆಲಸದ ಶೈಲಿ ಕಾಂಗ್ರೆಸ್ ಗೆ ಭಾರೀ ನಷ್ಟವನ್ನುಂಟುಮಾಡಿದೆ ಎಂದರು.
ಮಾಜಿ ದೆಹಲಿ ಸಚಿವ ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ, ಅವರ ಬಗ್ಗೆ ಶ್ಲಾಘಿಸಿದ ಶೀಲಾ ದೀಕ್ಷಿತ್, ಕಾಂಗ್ರೆಸ್ ತತ್ವಗಳನ್ನು ಒಪ್ಪಿಕೊಂಡವರು ಬಿಜೆಪಿ ಜೊತೆ ಇರುವುದು ಕಷ್ಟಸಾಧ್ಯ, ಮತ್ತೆ ಕಾಂಗ್ರೆಸ್ ಗೆ ಬರಲು ಇಚ್ಛಿಸುತ್ತಾರೆ ಎಂದರು.
ಕಳೆದ ವರ್ಷ ದೆಹಲಿ ಮಹಾನಗರ ಪಾಲಿಕೆ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದ ಲವ್ಲಿ ಕಳೆದ ಶನಿವಾರ ಕಾಂಗ್ರೆಸ್ ಸೇರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

SCROLL FOR NEXT