ದೇಶ

ಹಣ, ಹೆಸರಿಗಾಗಿ ಕಮಲ್ ಹಾಸನ್ ರಾಜಕೀಯಕ್ಕೆ ಬಂದಿಲ್ಲ: ಭೇಟಿ ಬಳಿಕ ರಜನಿಕಾಂತ್ ಹೇಳಿಕೆ

Srinivasamurthy VN
ಚೆನ್ನೈ: ನಟ ಕಮಲ್ ಹಾಸನ್ ಹಣ ಅಥವಾ ಹೆಸರಿಗಾಗಿ ರಾಜಕೀಯಕ್ಕೆ ಬಂದಿಲ್ಲ. ಪ್ರಾಮಾಣಿಕವಾಗಿ ಜನರಿಗೆ ಸೇವೆ ಮಾಡಲು ಬಯಸುತ್ತಿದ್ದಾರೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.
ಭಾನುವಾರ ನಟ ಕಮಲ್ ಹಾಸನ್ ಅವರು ನಟ ರಜನಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿ ಸುಮಾರು 1 ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದರು. ಚೆನ್ನೈನ ಪೋಯಸ್ ಗಾರ್ಡನ್ ನಿವಾಸಕ್ಕೆ ಇಂದು ಆಗಮಿಸಿದ್ದ ನಟ ಕಮಲ್  ಹಾಸನ್ ಅವರು, ಸುಮಾರು ವಿಚಾರಗಳು ಕುರಿತು ಚರ್ಚೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ರಜನಿಕಾಂತ್ ಕಮಲ್ ಹಾಸನ್ ಹಣ, ಹೆಸರು ಗಳಿಸಲು ರಾಜಕೀಯಕ್ಕೆ ಬಂದಿಲ್ಲ. ಪ್ರಾಮಾಣಿಕವಾಗಿ ಅವರು  ಜನಸೇವೆ ಮಾಡಬೇಕು ಎಂದು ಬಯಸಿದ್ದಾರೆ. ಅವರ ರಾಜಕೀಯ ಭವಿಷ್ಯ ಉಜ್ವಲವಾಗಿರಲಿ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ನಟ ಕಮಲ್ ಹಾಸನ್ ರಾಜಕೀಯ ವಿಚಾರದ ಕುರಿತು ಮಾತನಾಡಲು ನಿರಾಕರಿಸಿದರು. ಅಂತೆಯೇ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಮಲ್ ಹಾಸನ್, ಕಾಲವೇ ಇದಕ್ಕೆ ಉತ್ತರ ನೀಡಲಿದೆ  ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ನಟ ರಜನಿಕಾಂತ್ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ್ದ ನಟ ಕಮಲ್ ಹಾಸನ್, ರಜನಿಕಾಂತ್ ಅವರು ಕೇಸರಿಬಣ್ಣದ ಪರ ನಿಲುವು ಹೊಂದುವುದಿಲ್ಲ ಎಂಬ ಭರವಸೆ ಇದೆ ಎಂದು ಹೇಳಿದ್ದರು.
SCROLL FOR NEXT