ಸಂಗ್ರಹ ಚಿತ್ರ 
ದೇಶ

ಹಣ, ಹೆಸರಿಗಾಗಿ ಕಮಲ್ ಹಾಸನ್ ರಾಜಕೀಯಕ್ಕೆ ಬಂದಿಲ್ಲ: ಭೇಟಿ ಬಳಿಕ ರಜನಿಕಾಂತ್ ಹೇಳಿಕೆ

ನಟ ಕಮಲ್ ಹಾಸನ್ ಹಣ ಅಥವಾ ಹೆಸರಿಗಾಗಿ ರಾಜಕೀಯಕ್ಕೆ ಬಂದಿಲ್ಲ. ಪ್ರಾಮಾಣಿಕವಾಗಿ ಜನರಿಗೆ ಸೇವೆ ಮಾಡಲು ಬಯಸುತ್ತಿದ್ದಾರೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ಚೆನ್ನೈ: ನಟ ಕಮಲ್ ಹಾಸನ್ ಹಣ ಅಥವಾ ಹೆಸರಿಗಾಗಿ ರಾಜಕೀಯಕ್ಕೆ ಬಂದಿಲ್ಲ. ಪ್ರಾಮಾಣಿಕವಾಗಿ ಜನರಿಗೆ ಸೇವೆ ಮಾಡಲು ಬಯಸುತ್ತಿದ್ದಾರೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.
ಭಾನುವಾರ ನಟ ಕಮಲ್ ಹಾಸನ್ ಅವರು ನಟ ರಜನಿಕಾಂತ್ ಅವರ ನಿವಾಸಕ್ಕೆ ಭೇಟಿ ನೀಡಿ ಸುಮಾರು 1 ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದರು. ಚೆನ್ನೈನ ಪೋಯಸ್ ಗಾರ್ಡನ್ ನಿವಾಸಕ್ಕೆ ಇಂದು ಆಗಮಿಸಿದ್ದ ನಟ ಕಮಲ್  ಹಾಸನ್ ಅವರು, ಸುಮಾರು ವಿಚಾರಗಳು ಕುರಿತು ಚರ್ಚೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ನಟ ರಜನಿಕಾಂತ್ ಕಮಲ್ ಹಾಸನ್ ಹಣ, ಹೆಸರು ಗಳಿಸಲು ರಾಜಕೀಯಕ್ಕೆ ಬಂದಿಲ್ಲ. ಪ್ರಾಮಾಣಿಕವಾಗಿ ಅವರು  ಜನಸೇವೆ ಮಾಡಬೇಕು ಎಂದು ಬಯಸಿದ್ದಾರೆ. ಅವರ ರಾಜಕೀಯ ಭವಿಷ್ಯ ಉಜ್ವಲವಾಗಿರಲಿ ಎಂದು ನಾನು ಆಶಿಸುತ್ತೇನೆ ಎಂದು ಹೇಳಿದರು.
ಇದೇ ವೇಳೆ ಮಾತನಾಡಿದ ನಟ ಕಮಲ್ ಹಾಸನ್ ರಾಜಕೀಯ ವಿಚಾರದ ಕುರಿತು ಮಾತನಾಡಲು ನಿರಾಕರಿಸಿದರು. ಅಂತೆಯೇ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕಮಲ್ ಹಾಸನ್, ಕಾಲವೇ ಇದಕ್ಕೆ ಉತ್ತರ ನೀಡಲಿದೆ  ಎಂದು ಹೇಳಿದ್ದಾರೆ.
ಇನ್ನು ಈ ಹಿಂದೆ ನಟ ರಜನಿಕಾಂತ್ ರಾಜಕೀಯ ಪ್ರವೇಶದ ಕುರಿತು ಮಾತನಾಡಿದ್ದ ನಟ ಕಮಲ್ ಹಾಸನ್, ರಜನಿಕಾಂತ್ ಅವರು ಕೇಸರಿಬಣ್ಣದ ಪರ ನಿಲುವು ಹೊಂದುವುದಿಲ್ಲ ಎಂಬ ಭರವಸೆ ಇದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT