ಬೆಳ್ಳಿ ಆಭರಣ ವಿನ್ಯಾಸಕ ನೀರವ್ ಮೋದಿ( ಸಾಂದರ್ಭಿಕ ಚಿತ್ರ) 
ದೇಶ

ಹಗರಣ ಹೇಗೆ ನಡೆಯಿತು: 10 ದಿನಗಳೊಳಗೆ ವರದಿ ಸಲ್ಲಿಸುವಂತೆ ಪಿಎನ್ ಬಿಗೆ ಕೇಂದ್ರ ಜಾಗೃತ ಆಯೋಗ ಸೂಚನೆ

ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 11,400 ಕೋಟಿ ರೂ ಹಗರಣಕ್ಕೆ ಸಂಬಂಧಿಸಿದಂತೆ 10 ದಿನಗಳೊಳಗೆ ವರದಿ ಸಲ್ಲಿಸುವಂತೆ ಹಣಕಾಸು ಸಚಿವಾಲಯ ಹಾಗೂ ಬ್ಯಾಂಕಿಗೆ ಕೇಂದ್ರ ಜಾಗೃತಿ ಆಯೋಗ ಸೂಚಿಸಿದೆ.

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕಿನಲ್ಲಿ 11,400 ಕೋಟಿ ರೂ ಹಗರಣಕ್ಕೆ ಸಂಬಂಧಿಸಿದಂತೆ 10 ದಿನಗಳೊಳಗೆ ವರದಿ ಸಲ್ಲಿಸುವಂತೆ ಹಣಕಾಸು ಸಚಿವಾಲಯ ಹಾಗೂ ಬ್ಯಾಂಕಿಗೆ ಕೇಂದ್ರ ಜಾಗೃತಿ ಆಯೋಗ ಸೂಚಿಸಿದೆ.

ಪ್ರಕರಣ ಸಂಬಂಧ ಪಂಜಾಬ್ ನ್ಯಾಷನಲ್ ಬ್ಯಾಂಕ್, ಆರ್ ಬಿಐ ಹಾಗೂ ಹಣಕಾಸು ಸೇವಾ ಇಲಾಖೆ ಅಧಿಕಾರಿಗಳು ಎರಡು ಗಂಟೆಗಳ ಕಾಲ ಕೇಂದ್ರ ಜಾಗೃತ ಆಯೋಗಕ್ಕೆ ವರದಿ ನೀಡಿದ್ದು,ಈ ಪ್ರಕರಣದಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹೆಸರು ತಿಳಿಸಿ, ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಜಾಗೃತ ಆಯೋಗ ಅಧಿಕಾರಿಗಳಿಗೆ ತಿಳಿಸಿದೆ.

ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಾಗೂ ಹಣಕಾಸು ಸಚಿವಾಲಯದ ಅಧಿಕಾರಿಗಳ ನಂತರ ಸಿಬಿಐನೊಂದಿಗೂ ಕೇಂದ್ರ ಜಾಗೃತ ಆಯೋಗ ಸಭೆ ನಡೆಸಿತು. ಇದು ಬಹುಹಂತದಲ್ಲಿ ವೈಫಲ್ಯವಾಗಿರುವುದನ್ನು ಕೇಂದ್ರ ಜಾಗೃತ ಆಯೋಗದ ಗಮನಕ್ಕೆ ತರಲಾಗಿದೆ ಎಂದು ಸಿಬಿಐ ಹೇಳಿದೆ.

 ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಕೂಡಾ ಮುಂಬೈಯಲ್ಲಿನ ನೀರವ್ ಮೋದಿ ನಿವಾಸದ ಮೇಲೆ ದಾಳಿ ನಡೆಸಿ ಶೋಧ ನಡೆಸಿತು.

ಮುಂಬೈ, ಪುಣೆ, ಔರಾಗಬಾದ್, ಥಾಣೆ, ಕೊಲ್ಕತ್ತಾ, ದೆಹಲಿ, ಲಖನೌ, ಬೆಂಗಳೂರು, ಸೂರತ್ ಸೇರಿದಂತೆ ದೇಶದ 34 ಕಡೆಗಳಲ್ಲಿ ಕೇಂದ್ರ ತನಿಖಾ ತಂಡಗಳು ಶೋಧ ಕಾರ್ಯಾಚರಣೆ ನಡೆಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT