ಪಂಜಾಬ್ ನ್ಯಾಷನಲ್ ಬ್ಯಾಂಕ್ 
ದೇಶ

ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ: ಮತ್ತೆ 3 ನೌಕರರನ್ನು ಬಂಧಿಸಿದ ಸಿಬಿಐ

11 ಸಾವಿರ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ 3 ನೌಕರರನ್ನು ಸಿಬಿಐ ಬಂಧಿಸಿದೆ.

ನವದೆಹಲಿ: 11 ಸಾವಿರ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ್ಯಾಷನಲ್ ಬ್ಯಾಂಕ್ ನ 3 ನೌಕರರನ್ನು ಸಿಬಿಐ ಬಂಧಿಸಿದೆ. 
ವಿದೇಶಿ ವಿನಿಮಯ ವಿಭಾಗದ ಉಸ್ತುವಾರಿ ಹಾಗೂ ಮುಂಬೈ ನಾರಿಮನ್ ಪಾಯಿಂಟ್ ಶಾಖೆಯ ಚೀಫ್ ಮ್ಯಾನೇಜರ್ ಬಿಚ್ಚು ತಿವಾರಿ, ನಿವೃತ್ತ ಡೆಪ್ಯುಟಿ ಮ್ಯಾನೇಜರ್ ಗೋಕುಲ್ ನಾಥ್ ಶೆಟ್ಟಿ (ಕಳೆದ ವಾರ ಸಿಬಿಐ ನಿಂದ ಬಂಧನ) ಹಾಗೂ ಆತನ ಮ್ಯಾನೇಜರ್ ನ ಕೆಲಸಗಳನ್ನು ಮೇಲ್ವಿಚಾರಣೆ ನಡೆಸುವ ಜವಾಬ್ದಾರಿಯನ್ನೂ ತಿವಾರಿ ಹೊತ್ತಿದ್ದರು.
ವಿದೇಶಿ ವಿನಿಮಯದ ಸ್ಕೇಲ್ II ಮ್ಯಾನೇಜರ್ ಯಶ್ವಂತ್ ಜೋಷಿ ಅವರನ್ನೂ ಸಿಬಿಐ ಬಂಧಿಸಿದ್ದು ಸ್ವಿಫ್ಟ್ ಹಾಗೂ ಸಿಬಿಎಸ್ ನ ದಿನನಿತ್ಯದ ವರದಿಗಳನ್ನು ನಿರ್ವಹಣೆ ಮಾಡುತ್ತಿದ್ದರು, ಗೋಕುಲ್ ಶೆಟ್ಟಿಯ ಅಕ್ರಮಗಳ ಬಗ್ಗೆ ಸಂಪೂರ್ಣ ಮಾಹಿತಿ ಹೊಂದಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ. 
ಇನ್ನು ರಫ್ತು ವಿಭಾಗದ ಸ್ಕೇಲ್ I ಅಧಿಕಾರಿ ಪ್ರಫುಲ್ ಸಾವಂತ್ ನ್ನೂ ಬಂಧಿಸಲಾಗಿದ್ದು, ಪ್ರತಿದಿನವೂ ಸ್ವಿಫ್ಟ್ ಮೆಸೇಜ್ ಹಾಗೂ ವರದಿಗಳನ್ನು ಪರಿಶೀಲಿಸುತ್ತಿದ್ದ ಜವಾಬ್ದಾರಿ ಹೊಂದಿದ್ದರು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT