ದೆಹಲಿ ಮುಖ್ಯ ಕಾರ್ಯದರ್ಶಿಗಳ ಮೇಲೆ ಹಲ್ಲೆ: ಎಎಪಿ ಶಾಸಕರಿಗೆ ನ್ಯಾಯಾಂಗ ಬಂಧನ
ನವದೆಹಲಿ: ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ್ದ ಎಎಪಿ ಶಾಸಕರನ್ನು ಗುರುವಾರದವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
ಶಾಸಕರಾದ ಪ್ರಕಾಶ್ ಜರ್ವಾಲ್ ಮತ್ತು ಅಮಾನತುಲ್ಲಾ ಖಾನ್ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.
ಮುಖ್ಯ ಕಾರ್ಯದರ್ಶಿ ಪ್ರಕಾಶ್ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ಶಾಸಕರನ್ನು ದೆಹಲಿ ಪೋಲೀಸರು ಇಂದು ಮುಂಜಾನೆ ಬಂಧಿಸಿದ್ದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದಲ್ಲಿ ಮಂಗಳವಾರದಂದು ನಡೆದ ಸಭೆಯಲ್ಲಿ ಎಎಪಿ ಶಾಸಕರು ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ್ದರು. ಈ ಕುರಿತಂತೆ ಅಂಶು ಪ್ರಕಾಶ್ ಪೋಲೀಸ್ ಅಧಿಕಾರಿಗಳಿಗೆ ವಿವರವಾದ ಪತ್ರ ಬರೆದು ದೂರು ಸಲ್ಲಿಸಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos