ಸಂಗ್ರಹ ಚಿತ್ರ 
ದೇಶ

ಕರ್ನಾಟಕ: ರಾಜ್ಯದ ರೂ.2,920 ಕೋಟಿ ಹೆದ್ದಾರಿ ಯೋಜನೆಗೆ ಕೇಂದ್ರ ಒಪ್ಪಿಗೆ

ಕೇಂದ್ರ ಸಚಿವ ಸಂಪುಟವು ಕರ್ನಾಟಕದ ಪ್ರಮುಖ ಹೆದ್ದಾರಿ ಯೋಜನೆಯೊಂದಕ್ಕೆ ಮಂಗಳವಾರ ಅನುಮೋದನೆ ನೀಡಿದೆ...

ನವದೆಹಲಿ: ಕೇಂದ್ರ ಸಚಿವ ಸಂಪುಟವು ಕರ್ನಾಟಕದ ಪ್ರಮುಖ ಹೆದ್ದಾರಿ ಯೋಜನೆಯೊಂದಕ್ಕೆ ಮಂಗಳವಾರ ಅನುಮೋದನೆ ನೀಡಿದೆ. 
ಬೆಂಗಳೂರು ಹಾಗೂ ಮೈಸೂರು ಸಂಪರ್ಕಿಸುವ ಹೆದ್ದಾರಿ ಸಂಖ್ಯೆ-275ರ ಕೆಲವು ಭಾಗವನ್ನು ಷಟ್ಪಥವಾಗಿ ಪರಿವರ್ತಿಸಲು ಕೇಂದ್ರದಿಂದ ಅನುಮೋದನೆ ದೊರಕಿದ್ದು, ಯೋಜನೆಯ ಒಟ್ಟಾರೆ ವೆಚ್ಚ ರೂ.2,920 ಆಗಿದೆ. 
ನಿಡಫಟ್ಟ-ಮೈಸೂರು ನಡುವೆ ಸುಮಾರಿ 61 ಕಿ.ಮೀ ಅಂತರವಿದೆ. 74.2 ಕಿಮೀ ನಿಂದ 135.3 ಕಿ.ಮೀ ವರೆಗಿನ ಈ ರಸ್ತೆಯನ್ನು 6 ಪಥವಾಗಿ ಬದಲಿಸಲಾಗುತ್ತದೆ ಎಂದು ರಸ್ತೆ ಸಾರಿಗೆ ಸಚಿವಾಲಯವು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. 
ಹೈಬ್ರಿಡ್ ಎನ್ಯುಟಿ ಮೋಡ್ ವಿಧಾನದಲ್ಲಿ ಹೆದ್ದಾರಿಯನ್ನು ಪರಿವರ್ತಿಸಲಾಗುತ್ತಿದ್ದು, ಯೋಜನೆಯ ನಿಖರ ವೆಚ್ಚ ರೂ.2,919, 81 ಕೋಟಿಗಳು. ಇದರಲ್ಲಿ ಭೂ ಸ್ವಾಧೀನ ವೆಚ್ಚ ಮತ್ತು ನಿರ್ಮಾಣ ಪೂರ್ವ ವೆಚ್ಚಗಳೂ ಸೇರಿವೆ. ಹೆದ್ದಾರಿ ನಿರ್ಮಾಣಕ್ಕೆಂದೇ ರೂ.2,028, 93 ಕೋಟಿ ವೆಚ್ಚವಾಗಲಿದೆ ಎಂದು ಸಚಿವಾಲಯ ತಿಳಿಸಿದೆ. 
ಯೋಜನೆಯಿಂದ ಜನರಿಗೆ ಪ್ರತ್ಯಕ್ಷ ಮತ್ತು ಪರೋಕ್ಷ ಉದ್ಯೋಗಗಳು ದೊರಕಲಿದೆ. ಹೆದ್ದಾರಿ ನಿರ್ಮಾಣದ ವೇಳೆ ಸ್ಥಳೀಯವಾಗಿ ರೂ.2.48 ಲಕ್ಷ ಮಾನ ದಿನಗಳಷ್ಚು ಉದ್ಯೋಗ ಸೃಷ್ಟಿಯಾಗಲಿವೆ ಎಂದು ಅದಿ ತಿಳಿಸಿದೆ. 
ಹೆದ್ದಾರಿಯನ್ನು 6 ಪಥಗಳನ್ನಾಗಿ ಪರಿವರ್ತಿಸಲಾಗುತ್ತದೆ ಜೊತೆಗೆ 7 ಮೀ ಸರ್ವೀಸ್ ರಸ್ತೆಯನ್ನು ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣದಲ್ಲಿ ಬೈಪಾಸ್ ರಸ್ತೆಯನ್ನು ನಿರ್ಮಿಸುವ ವೇಳೆ ನಿರ್ಮಾಣ ಮಾಡಲಾಗುತ್ತದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT