ನರೇಂದ್ರ ಮೋದಿ, 
ದೇಶ

ಅಭಿವೃದ್ಧಿಗೆ ಸಾಮರ್ಥ್ಯ, ನೀತಿ, ಯೋಜನೆ, ನಿರ್ವಹಣೆ ಪ್ರಮುಖ ಅಂಶಗಳು: ಪ್ರಧಾನಿ ಮೋದಿ

ಸಾಮರ್ಥ್ಯ, ನೀತಿ, ಯೋಜನೆ ಮತ್ತು ನಿರ್ವಹಣೆ ಸಮರ್ಪಕವಾಗಿದ್ದರೆ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ....

ನವದೆಹಲಿ: ಸಾಮರ್ಥ್ಯ, ನೀತಿ, ಯೋಜನೆ ಮತ್ತು ನಿರ್ವಹಣೆ ಸಮರ್ಪಕವಾಗಿದ್ದರೆ ಅಭಿವೃದ್ಧಿ ಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ.
ಇಂದು ಉತ್ತರ ಪ್ರದೇಶ ಹೂಡಿಕೆದಾರರ ಸಮ್ಮೇಳನ 2018 ಅನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಉತ್ತರ ಪ್ರದೇಶ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯನ್ನು ಹಾಡಿ ಹೊಗಳಿದರು. ಅಲ್ಲದೆ ಯೋಗಿ ಆದಿತ್ಯನಾಥ್ ರ ಈ ಯೋಜನೆ ಸೂಪರ್ ಹಿಟ್ ಆಗಲಿದೆ ಎಂದರು.
ಸಾಮರ್ಥ್ಯ + ನೀತಿ + ಯೋಜನೆ + ನಿರ್ವಹಣೆ ಅಭಿವೃದ್ಧಿಯನ್ನು ಮುನ್ನಡೆಸಲಿದೆ. ಈಗ ಉತ್ತರ ಪ್ರದೇಶ ಸರ್ಕಾರ ಸಹ ಅಂತಹ ಸೂಪರ್ ಹಿಟ್ ನಿರ್ವಹಣೆಗೆ ಸಿದ್ಧವಾಗಿದೆ ಎಂದರು.
ಉತ್ತರ ಪ್ರದೇಶ ಸರ್ಕಾ ವಿಭಿನ್ನ ವಲಯಗಳಿಗೆ ವಿಭಿನ್ನವಾದ ನೀತಿಯನ್ನು ರೂಪಿಸುತ್ತಿದೆ. ಉದಾಹರಣೆಗೆ, ಕೈಗಾರಿಕಾ ಹೂಡಿಕೆಯನ್ನು ಉದ್ಯೋಗ ಅವಕಾಶಗಳೊಂದಿಗೆ ವಿಲೀನ ಮಾಡಿದೆ. ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆ ಗೇಮ್ ಚೇಂಜರ್ ಎಂದು ಪ್ರಧಾನಿ ಹೇಳಿದರು.
ಯೋಗಿ ಆದಿತ್ಯನಾಥ್ ಸರ್ಕಾರ ರೈತರಿಗೆ, ಮಹಿಳೆಯರಿಗೆ ಮತ್ತು ರಾಜ್ಯದ ಯುುವಕರಿಗೆ ನೀಡಿದ ಭರವಸೆಗಳನ್ನು ಈಡೇರಿಸುತ್ತಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT