ನವೀನ್ ಪಟ್ನಾಯಕ್ 
ದೇಶ

ಸಿಎಂ ಪಟ್ನಾಯಕ್ ಮೇಲೆ ಶೂ ಎಸೆತ: ಕೆಲವರ ಪ್ರಚೋದನೆಯಿಂದ ಶೂ ಎಸೆದೆ; ಆರೋಪಿ ಹೇಳಿಕೆ

ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿದ್ದ ಒಡಿಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರ ಮೇಲೆ ಶೂ ಎಸೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ...

ಒಡಿಸಾ:  ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿದ್ದ ಒಡಿಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್  ಅವರ ಮೇಲೆ ಶೂ ಎಸೆದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 
ಶೂ ಎಸೆದ ಆರೋಪಿ ಕಾರ್ತಿಕ್ ಮೆಹರ್ ನನ್ನು ಪೊಲೀಸರು ಬಂಧಿಸಿದ್ದು, ಕೆಲವರ ಪ್ರಚೋದನೆಯಿಂದಾಗಿ ನಾನು ಶೂ ಎಸೆದೆ ಎಂದು ಹೇಳಿದ್ದಾನೆ,
ಶೂ ಎಸೆಯುವಂತೆ ಯಾರು ಪ್ರಚೋದನೆ ನೀಡಿದರು ಎಂಬ ಪ್ರಶ್ನೆಗೆ ಉತ್ತರಿಸಿದ ಕಾರ್ತಿಕ್ ಅವರ ಹೆಸರನ್ನು ಹೇಳಲು ನಿರಾಕರಿಸಿದ್ದಾನೆ, ಮೂರು ಮಂದಿ  ನನ್ನನ್ನು ಪ್ರಚೋದಿಸಿದ್ದಾರೆ, ಅವರು ಬಿಜೆಪಿಯವರು ಇರಬಹುದು, ಬಿಜೆಡಿ ಪಕ್ಷದವರಿರಬಹುದು, ಕಾಂಗ್ರೆಸ್ ಅಥವಾ ಆಮ್ ಆದ್ಮಿ ಪಕ್ಷದವರೇ ಇರಬಹುದು, ನಾನು ಏಕೆ ಅವರ ಗುರುತನ್ನು ಹೇಳಲಿ ಎಂದು ಪ್ರಶ್ನಿಸಿದ್ದಾನೆ.
ನಾನು ಯಾವುದೇ ರಾಜಕೀಯ ಪಕ್ಷದ ಬೆಂಬಲಿಗನಲ್ಲ, ರಾಜಕೀಯ ನಾಯಕರು ಏಕೆ ಇಲ್ಲಿಗೆ ಬಂದು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಬೇಕು.  ಸಾರ್ವಜನಿಕರು ತಮಗೆ ಬೇಕಾದವರಿಗೆ ವೋಟು ನೀಡಿ ಆಯ್ಕೆ ಮಾಡಲಿದ್ದಾರೆ ಎಂದು ಹೇಳಿದ್ದಾನೆ. ಬಾರ್ಗಾದಲ್ಲಿ ನಡೆದ ಸಾರ್ವಜನಿಕ ಸಭೆಯೊಂದರಲ್ಲಿ ಭಾಗವಹಿಸಿದ್ದ ಪಟ್ನಾಯಕ್ ಮೇಲೆ ಶೂ ಎಸೆಯಲಾಗಿತ್ತು.  ನಂತರ ಆರೋಪಿಯನ್ನು ನೆರೆದಿದ್ದ ಜನ ಥಳಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT