ಸಂಗ್ರಹ ಚಿತ್ರ 
ದೇಶ

ಬಿಜೆಪಿಗಿಂತಲೂ ಎಐಯುಡಿಎಫ್ ವೇಗವಾಗಿ ಬೆಳೆಯುತ್ತಿದೆ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿಕೆ

ಅಸ್ಸಾಂನ ಕೆಲ ಪ್ರದೇಶಗಳಲ್ಲಿ ಎಐಯುಡಿಎಫ್ ಸಂಘಟನೆ ವೇಗವಾಗಿ ಬೆಳೆಯುತ್ತಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.

ದಿಸ್ ಪುರ್: ಅಸ್ಸಾಂನ ಕೆಲ ಪ್ರದೇಶಗಳಲ್ಲಿ ಎಐಯುಡಿಎಫ್ ಸಂಘಟನೆ ವೇಗವಾಗಿ ಬೆಳೆಯುತ್ತಿದೆ ಎಂದು ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ಅಸ್ಸಾಂ ಕೆಲ ಜಿಲ್ಲೆಗಳಲ್ಲಿ ಮುಸ್ಲಿಮರ ಸಂಖ್ಯಾಬಲ ಗಣನೀಯ ಪ್ರಮಾಣದಲ್ಲಿ ಏರಿಕೆಗುತ್ತಿದೆ ಎಂಬ ವರದಿಯನ್ನು ಹಿನ್ನಲೆಯಾಗಿಟ್ಟುಕೊಂಡು ಮಾತನಾಡಿದ ಬಿಪಿನ್ ರಾವತ್ ಅವರು, ಪಾಕಿಸ್ತಾನ ಚೀನಾದೇಶದ ನೆರವನೊಂದಿಗೆ  ಭಾರತ ಮೇಲೆ ಪರೋಕ್ಷ ಯುದ್ಧ ಸಾರುತ್ತಿದೆ. ಇದಕ್ಕೆ ಬಾಂಗ್ಲಾ ಗಡಿಯಲ್ಲಿರುವ ಅಸ್ಸಾಂಗೆ ಅಕ್ರಮ ಬಾಂಗ್ಲಾದೇಶೀಯರನ್ನು ರವಾನೆ ಮಾಡಿ ಈ ಪ್ರಾಂತ್ಯದ ಅಶಾಂತಿಯನ್ನುಂಟು ಮಾಡುತ್ತಿದೆ ಎಂದು ಕಿಡಿಕಾರಿದರು.
ಈಶಾನ್ಯ ಪ್ರದೇಶದಲ್ಲಿ ಜನ ಸಾಮಾನ್ಯರ ಮತ್ತು ಸೇನೆಯ ಅಂತರ ಕಡಿತಗೊಳಿಸುವ ಮತ್ತು ಭದ್ರತಾ ಗಡಿಗಳ ಬಗ್ಗೆ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಭಾರತದ ಮೇಲೆ ಚೀನಾ ನೆರವಿನೊಂದಿಗೆ  ಪಾಕಿಸ್ತಾನ ಯೋಜಿತ ಉಪಾಯದೊಂದಿಗೆ ಅಕ್ರಮ ಬಾಂಗ್ಲಾ ವಲಸಿಗರನ್ನು ಭಾರತಕ್ಕೆ ರವಾನೆ ಮಾಡುತ್ತಿದೆ. ಇದರಿಂದ ದೇಶದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ನಾನು ಗಮನಿಸಿದಂತೆ ಎಐಯುಡಿಎಫ್ ಎಂಬ ಸಂಘಟನೆ  1980ರಲ್ಲಿ ಬಿಜೆಪಿ ಬೆಳೆದ ವೇಗಕ್ಕಿಂತಲೂ  ಹೆಚ್ಚು ವೇಗವಾಗಿ ಬೆಳೆಯುತ್ತಿದೆ. 
ನನ್ನ ಅಭಿಪ್ರಾಯದಂತೆ ಈಶಾನ್ಯ ವಲಯದ ನೆರೆ ದೇಶ ತುಂಬಾ ಚಾಣಾಕ್ಷವಾಗಿ ಗೇಮ್ ಪ್ಲೇ ಮಾಡುತ್ತಿದ್ದು, ಗಡಿಯನ್ನು ಸದಾ ಕಾಲ ಅಶಾಂತಿಯಿಂದ ಇರಿಸಲು ಸದಾ ಪ್ರಯತ್ನಿಸುತ್ತಿದ್ದು, ಅಕ್ರಮ ವಲಸಿಗರನ್ನು ಚಾಣಾಕ್ಷವಾಗಿ  ದೇಶದೊಳಗೆ ನುಗ್ಗಿಸಿ ಗಡಿ ಅಶಾಂತಿಗೆ ಕಾರಣವಾಗುತ್ತಿದೆ. ಈಶಾನ್ಯ ಗಡಿಯಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ದೊಡ್ಡ ಸಮಸ್ಯೆಯಾಗಿ ಕಾಡುತ್ತಿದ್ದು, ರಾಜ್ಯದಲ್ಲಿ ಹೊರಗಿನವರು ಅಕ್ರಮವಾಗಿ ನೆಲೆಸಿದ್ದಾರೆ. ಎಐಯುಡಿಎಫ್  ಎಂಬ ಪಕ್ಷ ಅಥವಾ ಸಂಘಟನೆ ಇಂತಹ ಅಕ್ರಮ ವಲಸಿಗರ ನೆರವಿಗೆ ನಿಂತಿದ್ದು, ಈ ಪಕ್ಷದ ಕುರಿತು ನೀವು ಸೂಕ್ಷ್ಮವಾಗಿ ಗಮನಿಸಿದರೆ, 1980ರಲ್ಲಿ ಬಿಜೆಪಿ ಬೆಳೆದ ವೇಗಕ್ಕಿಂತಲೂ ಈ ಪಕ್ಷ ಹೆಚ್ಚು ವೇಗವಾಗಿ ಬೆಳೆಯುತ್ತಿದೆ ಎಂದು  ಬಿಪಿನ್ ರಾವತ್ ಹೇಳಿದ್ದಾರೆ.
ರಾಜಕೀಯ ದುರುದ್ದೇಶ ಪೂರಿತ ಹೇಳಿಕೆ ಎಂದ ಅಸ್ಸಾಂ ಮೂಲದ ಸಂಘಟನೆ
ಇನ್ನು ಬಿಪಿನ್ ರಾವತ್ ಅವರ ಹೇಳಿಕೆ ಬಹಿರಂಗವಾಗುತ್ತಿದ್ದಂತೆಯೇ ರಾವತ್ ಹೇಳಿಕೆ ಕಿಡಿಕಾರಿರುವ ಎಐಯುಡಿಎಫ್, ಇದೊಂದು ರಾಜಕೀಯ ದುರುದ್ದೇಶ ಪೂರಿತ ಹೇಳಿಕೆಯಾಗಿದೆ ಎಂದು ಹೇಳಿದೆ. ಅಲ್ಲದೆ ರಾಜ್ಯದಲ್ಲಿ ಇತರೆ  ಪಕ್ಷಗಳ ದುರಾಡಳಿತದಿಂದ ಜನ ರೋಸಿ ಹೋಗಿದ್ದು, ಖಂಡಿತ ನಮ್ಮ ಪಕ್ಷ ಅಧಿಕಾರಕ್ಕೇರಲಿದೆ ಎಂದು ಎಐಯುಡಿಎಫ್ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT