ಬಿಪಿನ್ ರಾವತ್ 
ದೇಶ

ರಾವತ್ ಹೇಳಿಕೆಯಲ್ಲಿ ಧಾರ್ಮಿಕ ಅಥವಾ ರಾಜಕೀಯ ಉದ್ದೇಶ ಇಲ್ಲ: ಸೇನೆ

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಬೆಂಬಲಕ್ಕೆ ನಿಂತಿರುವ ಭಾರತೀಯ ಸೇನೆ, ರಾವತ್ ಹೇಳಿಕೆಯಲ್ಲಿ.....

ನವದೆಹಲಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಬೆಂಬಲಕ್ಕೆ ನಿಂತಿರುವ ಭಾರತೀಯ ಸೇನೆ, ರಾವತ್ ಹೇಳಿಕೆಯಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಉದ್ದೇಶ ಇಲ್ಲ ಎಂದು ಗುರುವಾರ ಸ್ಪಷ್ಟಪಡಿಸಿದೆ.
ಬಿಜೆಪಿಗಿಂತಲೂ ಅಸ್ಸಾಂ ರಾಜಕೀಯ ಪಕ್ಷ ಎಐಯುಡಿಎಫ್ ವೇಗವಾಗಿ ಬೆಳೆಯುತ್ತಿದೆ ಎಂಬ ರಾವತ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಸೇನೆ ಸಮರ್ಥಿಸಿಕೊಂಡಿದೆ.
ಅಸ್ಸಾಂ ಕೆಲ ಜಿಲ್ಲೆಗಳಲ್ಲಿ ಮುಸ್ಲಿಮರ ಸಂಖ್ಯಾಬಲ ಗಣನೀಯ ಪ್ರಮಾಣದಲ್ಲಿ ಏರಿಕೆಗುತ್ತಿದೆ ಎಂಬ ವರದಿಯನ್ನು ಹಿನ್ನಲೆಯಾಗಿಟ್ಟುಕೊಂಡು ಮಾತನಾಡಿದ ಬಿಪಿನ್ ರಾವತ್ ಅವರು, ಪಾಕಿಸ್ತಾನ ಚೀನಾದೇಶದ ನೆರವನೊಂದಿಗೆ  ಭಾರತ ಮೇಲೆ ಪರೋಕ್ಷ ಯುದ್ಧ ಸಾರುತ್ತಿದೆ. ಇದಕ್ಕೆ ಬಾಂಗ್ಲಾ ಗಡಿಯಲ್ಲಿರುವ ಅಸ್ಸಾಂಗೆ ಅಕ್ರಮ ಬಾಂಗ್ಲಾದೇಶೀಯರನ್ನು ರವಾನೆ ಮಾಡಿ ಈ ಪ್ರಾಂತ್ಯದ ಅಶಾಂತಿಯನ್ನುಂಟು ಮಾಡುತ್ತಿದೆ ಎಂದು ಕಿಡಿಕಾರಿದರು.
ಈಶಾನ್ಯ ಪ್ರದೇಶದಲ್ಲಿ ಜನ ಸಾಮಾನ್ಯರ ಮತ್ತು ಸೇನೆಯ ಅಂತರ ಕಡಿತಗೊಳಿಸುವ ಮತ್ತು ಭದ್ರತಾ ಗಡಿಗಳ ಬಗ್ಗೆ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಭಾರತದ ಮೇಲೆ ಚೀನಾ ನೆರವಿನೊಂದಿಗೆ  ಪಾಕಿಸ್ತಾನ ಯೋಜಿತ ಉಪಾಯದೊಂದಿಗೆ ಅಕ್ರಮ ಬಾಂಗ್ಲಾ ವಲಸಿಗರನ್ನು ಭಾರತಕ್ಕೆ ರವಾನೆ ಮಾಡುತ್ತಿದೆ. ಇದರಿಂದ ದೇಶದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ನಾನು ಗಮನಿಸಿದಂತೆ ಎಐಯುಡಿಎಫ್, ಬಿಜೆಪಿ ಬೆಳೆದ ವೇಗಕ್ಕಿಂತಲೂ  ಹೆಚ್ಚು ವೇಗವಾಗಿ ಬೆಳೆಯುತ್ತಿದೆ ಎಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT