ಸಂಗ್ರಹ ಚಿತ್ರ 
ದೇಶ

ಕಾವೇರಿ ವಿಚಾರವಾಗಿ ಕೇಂದ್ರ ಯಾವುದೇ ರಾಜ್ಯದ ಪರವಾಗಿಯೂ ಇಲ್ಲ; ಕೇಂದ್ರ ಸರ್ಕಾರ

ಕಾವೇರಿ ನದಿ ನೀರು ವಿವಾದ ಸಂಬಂಧ ಕೇಂದ್ರ ಸರ್ಕಾರ ಯಾವುದೇ ರಾಜ್ಯದ ಪರವಾಗಿಯೂ ಇಲ್ಲ ಎಂದು ಕೇಂದ್ರ ಸಚಿವ ಪುರುಷೋತ್ತಮ್ ರುಪಾಲಾ ಅವರು ಬುಧವಾರ ಹೇಳಿದ್ದಾರೆ...

ಕೊಯಮತ್ತೂರು: ಕಾವೇರಿ ನದಿ ನೀರು ವಿವಾದ ಸಂಬಂಧ ಕೇಂದ್ರ ಸರ್ಕಾರ ಯಾವುದೇ ರಾಜ್ಯದ ಪರವಾಗಿಯೂ ಇಲ್ಲ ಎಂದು ಕೇಂದ್ರ ಸಚಿವ ಪುರುಷೋತ್ತಮ್ ರುಪಾಲಾ ಅವರು ಬುಧವಾರ ಹೇಳಿದ್ದಾರೆ. 
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿರುವ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಕೇಂದ್ರ ಸರ್ಕಾರ ಯಾವುದೇ ನಿರ್ಧಾರಗಳನ್ನು ಕೈಗೊಳ್ಳುತ್ತಿಲ್ಲ ಎಂಬ ಆರೋಪಗಳು ಈ ಹಿಂದೆ ಕೇಳಿ ಬಂದಿದ್ದವು. 
ಈ ಹಿನ್ನಲೆಯಲ್ಲಿ ಆರೋಪಗಳನ್ನು ತಳ್ಳಿಹಾಕಿರುವ ರುಪಾಲಾ ಅವರು, ಕಾವೇರಿ ವಿವಾದ ಸಂಬಂಧ ಯಾವುದೇ ರಾಜ್ಯದ ಪರವಾಗಿಯೂ ಕೇಂದ್ರ ಸರ್ಕಾರವಿಲ್ಲ ಎಂದು ಹೇಳಿದ್ದಾರೆ. 
ರೈತರಿಗೆ ಲಾಭವಾಗುವ ಕಡೆಗೆ ಕೇಂದ್ರ ಸರ್ಕಾರ ನಿಲ್ಲುತ್ತದೆ. ಕಾವೇರಿ ವಿಚಾರ ಅತ್ಯಂತ ಗಂಭೀರ ವಿಚಾರವಾಗಿದ್ದು, ಉಭಯ ರಾಜ್ಯಗಳ ನಾಯಕರನ್ನು ಕರೆದು ಮಾತುಕತೆ ನಡೆಸಲು ನಾವು ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ಮಾತುಕತೆ ನಡೆಸಿ ರೈತರ ಹಿತಾಸಕ್ತಿಗೆ ಸಂಬಂಧಿಸಿ ಸಲಹೆ ಹಾಗೂ ಮಾರ್ಗದರ್ಶನಗಳನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಕಾವೇರಿ ವಿವಾದ ಸಂಬಂಧ ತಮಿಳುನಾಡು ರೈತರು ಕಳೆದ ವರ್ಷ ತಿಂಗಳಾನುಗಟ್ಟಲೆ ರಾಜಧಾನಿ ದೆಹಲಿಯಲ್ಲಿ ನಡೆಸಿದ ಪ್ರತಿಭಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ವಿಚಾರವನ್ನು ರಾಜಕೀಯ ಮಾಡಲಾಗುತ್ತಿದೆ. ರೈತರಿಗೆ ಲಾಭ ಮಾಡಲು ಭಾರತದ ಇತಿಹಾಸದಲ್ಲಿಯೇ ಮೋದಿ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಂಡಿದೆ. ಯೂರಿಯಾ, ರೈತರ ಆದಾಯ ದ್ವಿಗುಣಗೊಳಿಸುವುದು ಹೀಗೆ ನಾನಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. 25 ವರ್ಷಗಳಿಂದಲೂ ಜಾರಿಯಾಗದೆ ಸ್ಥಗಿತಗೊಂಡಿದ್ದ 99 ನೀರಾವರಿ ಯೋಜನೆಗೆ ರೂ.50,000 ಕೋಟಿಯನ್ನು ಸರ್ಕಾರ ಮೀಸಲಿಟ್ಟಿದೆ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸ್ಪಷ್ಟ ಉದ್ದೇಶದೊಂದಿಗೆ ಆರಂಭಗೊಂಡ Operation Sindoor ಗುರಿ ತಲುಪಿದ ಮೇಲೆ ಬೇಗನೆ ನಿಲ್ಲಿಸಲಾಯಿತು: IAF ಮುಖ್ಯಸ್ಥ

ಪ್ರಧಾನಿ ಮೋದಿ 'ಆಧುನಿಕ ರಾವಣ: ಶೀಘ್ರವೇ ಅವರ ಚಿನ್ನದ ಅರಮನೆ ಸುಟ್ಟು ಬೂದಿಯಾಗಲಿದೆ; ಉದಿತ್ ರಾಜ್

"ಅಪರಿಚಿತರು ನನ್ನ ಮಗಳ ನಗ್ನ ಫೋಟೋಗಳನ್ನು ಕೇಳಿದ್ದರು, ಆಕೆ...." ಸೈಬರ್ ಅಪರಾಧದ ಬಗ್ಗೆ ನಟ Akshay Kumar ತೀವ್ರ ಕಳವಳ

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ, ಸರ್ಕಾರದ ಬಳಿ ಹಣವಿಲ್ಲ: ಎಚ್‌ಡಿ ದೇವೇಗೌಡ

ಆಡಳಿತ ವೈಫಲ್ಯದ ಲಾಭ ಪಡೆಯಲೂ ವಿಫಲವಾಗಿರುವ ಪ್ರತಿಪಕ್ಷ ಬಿಜೆಪಿ (ನೇರ ನೋಟ)

SCROLL FOR NEXT