ಕಾರ್ತಿ ಚಿದಂಬರಂ 
ದೇಶ

ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಇಡಿ ಸಮನ್ಸ್ ಗೆ ತಡೆ ಕೋರಿ ಸುಪ್ರೀಂಗೆ ಕಾರ್ತಿ ಚಿದಂಬರಂ ಮನವಿ

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಜಾರಿ...

ನವದೆಹಲಿ:  ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ನೀಡಿರುವ ಸಮನ್ಸ್ ಗೆ ತಡೆ ನೀಡಬೇಕು ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರು ಗುರುವಾರ ಸುಪ್ರೀಂ ಕೋರ್ಟ್ ಮನವಿ ಸಲ್ಲಿಸಿದ್ದಾರೆ.
ಅರ್ಜಿ ಸ್ವೀಕರಿಸಿದ ಸುಪ್ರೀಂ ಕೋರ್ಟ್ ವಿಚಾರಣೆಯನ್ನು ಫೆ.23ಕ್ಕೆ ನಿಗದಿ ಮಾಡಿದೆ.
ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಅಡಿ ಕಾರ್ತಿ ಚಿದಂಬರಂ ವಿರುದ್ಧ ಇಡಿ ಮೇ, 2017ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಲೆಕ್ಕ ಪರಿಶೋಧಕ (ಸಿಎ) ಎಸ್.ಭಾಸ್ಕರನ್ ಅವರನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ದೆಹಲಿ ಹೈಕೋರ್ಟ್ ಇಡಿ ವಶಕ್ಕೆ ನೀಡಿದೆ.
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಸಿಬಿಐ ಸಹ ಪ್ರಕರಣ ದಾಖಲಿಸಿಕೊಂಡಿದೆ. ಅಲ್ಲದೆ ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದರೂ ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಕಾರ್ತಿ ವಿರುದ್ಧ ಲುಕ್ ಔಟ್ ನೋಟಿಸ್ ಸಹ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT