ರಜನಿಕಾಂತ್ - ಕಮಲ್ ಹಾಸನ್ 
ದೇಶ

ರಾಜಕೀಯ ಪ್ರವೇಶಿಸುವ ಮುನ್ನ ರಹಸ್ಯವಾಗಿ ರಜನಿ ಭೇಟಿ ಮಾಡಿದ ಕಮಲ್

ನಾನು ರಾಜಕೀಯ ಪ್ರವೇಶಿಸುವ ಮುನ್ನ ನನ್ನ ಸಮಕಾಲೀನ ನಟ ಹಾಗೂ ಸ್ನೇಹಿತ ರಜನಿಕಾಂತ್ ಅವರನ್ನು ರಹಸ್ಯವಾಗಿ....

ಚೆನ್ನೈ: ನಾನು ರಾಜಕೀಯ ಪ್ರವೇಶಿಸುವ ಮುನ್ನ ನನ್ನ ಸಮಕಾಲೀನ ನಟ ಹಾಗೂ ಸ್ನೇಹಿತ ರಜನಿಕಾಂತ್ ಅವರನ್ನು ರಹಸ್ಯವಾಗಿ ಭೇಟಿ ಮಾಡಿ ಚರ್ಚಿಸಿದ್ದೇನೆ ಎಂದು ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರು ಹೇಳಿಕೊಂಡಿದ್ದಾರೆ.
ನಿನ್ನೆಯಷ್ಟೇ ತಮ್ಮ ನೂತನ ರಾಜಕೀಯ ಪಕ್ಷ ಮಕ್ಕಳ್ ನೀಥಿ ಮಯ್ಯಂ ಘೋಷಿಸಿದ ಕಮಲ್ ಹಾಸನ್ ಅವರು ರಜನಿಕಾಂತ್ ಅವರನ್ನು ಯಾವಾಗ ಭೇಟಿ ಮಾಡಿದ್ದರು ಎಂಬುದನ್ನು ಹೇಳಿಲ್ಲ. ಆದರೆ ಮುಂದೆ ರಾಜಕೀಯದಲ್ಲಿ ವೈರಿಗಳಾದರೂ ಪರಸ್ಪರ ಗೌರವ ಉಳಿಸಿಕೊಳ್ಳಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಈ ಕುರಿತು ತಮಿಳು ನಿಯತಕಾಲಿಕೆ ಆನಂದ ವಿಕಟನ್ ನಲ್ಲಿ ಕಮಲ್ ಹಾಸನ್ ಬರೆದುಕೊಂಡಿದ್ದು, ಬಿಗ್ ಬಾಸ್ ಕಾರ್ಯಕ್ರಮದ ಚಿತ್ರಕರಣದ ವೇಳೆ ರಜನಿಕಾಂತ್ ಅವರನ್ನು ಭೇಟಿ ಮಾಡಿ ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಚರ್ಚಿಸಿರುವುದಾಗಿ ಹೇಳಿದ್ದಾರೆ.
ತಮಿಳು ಬಿಗ್ ಬಾಸ್ ಕಾರ್ಯಕ್ರಮದ ಚಿತ್ರೀಕರಣ ನಡೆಯುತ್ತಿದ್ದ ಸ್ಥಳದ ಸಮೀಪವೇ ರಜನಿಕಾಂತ್ ಅವರ ಕಾಳ ಚಿತ್ರದ ಚಿತ್ರೀಕರಣ ನಡೆಯುತ್ತಿತ್ತು. ಹೀಗಾಗಿ ನಾನೇ ಭೇಟಿಯ ವಿಷಯ ಪ್ರಸ್ತಾಪಿಸಿದೆ ಎಂದು ಕಮಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT