ನವದೆಹಲಿ: ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ರಂತಹ ಅಧಿಕಾರಿಗಳಿಗೆ ಹೊಡೆಯಬೇಕು ಎಂದು ಆಮ್ ಆದ್ಮಿ ಪಕ್ಷದ ಶಾಸಕ ನರೇಶ್ ಬಲ್ಯಾನ್ ಅವರು ಶುಕ್ರವಾರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಉತ್ತಮ ನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಬಲ್ಯಾನ್, ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರಿಗೆ ಏನಾಗಿದೆ, ನಮ್ಮ ವಿರುದ್ಧ ಏಕೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಅಂತ ಗೊತ್ತಿಲ್ಲ. ಆದರೆ ಅಂತಹ ಹೊಡೆದು ಪಾಠ ಕಲಿಸಬೇಕು. ಜನ ಸಾಮಾನ್ಯರ ಕೆಲಸಗಳಿಗೆ ಅಡ್ಡಿಪಡಿಸುವ ಇಂತಹ ಅಧಿಕಾರಿಗಳಿಗೆ ಹೊಡೆದು ಪಾಠ ಕಲಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಆಮ್ ಆದ್ಮಿ ಪಕ್ಷದ ಇಬ್ಬರು ಶಾಸಕರು ಜೈಲು ಪಾಲಾಗಿದ್ದು, ಬಂಧಿತ ಶಾಸಕರಾದ ಅಮನತುಲ್ಲಾ ಖಾನ್ ಮತ್ತು ಪ್ರಕಾಶ್ ಜರ್ವಾಲ್ ಅವರ ಜಾಮೀನು ಅರ್ಜಿಯನ್ನು ಇಂದು ದೆಹಲಿ ಕೋರ್ಟ್ ವಜಾಗೊಳಿಸಿದೆ.
ನಿನ್ನೆ ಮೆಟ್ರೊಪೋಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಆರೋಪಿ ಆಪ್ ಶಾಸಕರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು.
ಫೆ.19ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದಲ್ಲಿ ಸಭೆ ನಡೆಯುತ್ತಿದ್ದ ವೇಳೆ ತಮ್ಮ ಮೇಲೆ ಆಪ್ ಶಾಸಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಮುಖ್ಯ ಕಾರ್ಯದರ್ಶಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos