ಕೇಂದ್ರ ಸಚಿವ ವಿ.ಕೆ. ಸಿಂಗ್ 
ದೇಶ

ಎಐಯುಡಿಎಫ್ ಕುರಿತು ಹೇಳಿಕೆ: ಸೇನಾ ಮುಖ್ಯಸ್ಥ ರಾವತ್'ಗೆ ವಿ.ಕೆ. ಸಿಂಗ್ ಬೆಂಬಲ

ಅಸ್ಸಾಂನ ಕೆಲ ಪ್ರದೇಶಗಳಲ್ಲಿ ಎಐಯುಡಿಎಫ್ ಸಂಘಟನೆ ವೇಗವಾಗಿ ಬೆಳೆಯುತ್ತಿದೆ ಎಂಬ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಹೇಳಿಕೆಗೆ ಕೇಂದ್ರ ಸಚಿವ ವಿ.ಕೆ. ಸಿಂಗ್ ಅವರು ಶುಕ್ರವಾರ ಬೆಂಬಲ ವ್ಯಕ್ತಪಡಿಸಿದ್ದಾರೆ...

ಮುಂಬೈ: ಅಸ್ಸಾಂನ ಕೆಲ ಪ್ರದೇಶಗಳಲ್ಲಿ ಎಐಯುಡಿಎಫ್ ಸಂಘಟನೆ ವೇಗವಾಗಿ ಬೆಳೆಯುತ್ತಿದೆ ಎಂಬ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಹೇಳಿಕೆಗೆ ಕೇಂದ್ರ ಸಚಿವ ವಿ.ಕೆ. ಸಿಂಗ್ ಅವರು ಶುಕ್ರವಾರ ಬೆಂಬಲ ವ್ಯಕ್ತಪಡಿಸಿದ್ದಾರೆ. 
ರಾವತ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ತಮಗೆ ಅನಿಸಿದ್ದನ್ನು ಸೇನಾ ಮುಖ್ಯಸ್ಥರು ಹೇಳಬಹುದು. ಅವರ ಹೇಳಿಕೆಯನ್ನು ರಾಜಕೀಯ ಮಾಡಬಾರದು. ಪ್ರತೀಯೊಂದನ್ನು ರಾಜಕೀಯ ಮಾಡುವ ಅಭ್ಯಾಸವನ್ನು ನಾವು ಹೊಂದಿದ್ದೇವೆ. ಸೇನಾ ಮುಖ್ಯಸ್ಥರು ಹೇಳಬೇಕು ಎಂದಿರುವುದನ್ನು ಹೇಳಲು ಅವಕಾಶ ಮಾಡಿಕೊಡಬೇಕು. ಅದು ನಿಮಗಿಷ್ಟ ಎಂದರೆ, ಇಷ್ಟ ಪಡಬೇಡಿ ಎಂದು ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದ ರಾವತ್ ಅವರು, "ಭಾರತದ ಮೇಲೆ ಚೀನಾ ನೆರವಿನೊಂದಿಗೆ  ಪಾಕಿಸ್ತಾನ ಯೋಜಿತ ಉಪಾಯದೊಂದಿಗೆ ಅಕ್ರಮ ಬಾಂಗ್ಲಾ ವಲಸಿಗರನ್ನು ಭಾರತಕ್ಕೆ ರವಾನೆ ಮಾಡುತ್ತಿದೆ. ಇದರಿಂದ ದೇಶದಲ್ಲಿ ಅಶಾಂತಿ ಸೃಷ್ಟಿಯಾಗುತ್ತಿದೆ. ನಾನು ಗಮನಿಸಿದಂತೆ ಎಐಯುಡಿಎಫ್ ಎಂಬ ಸಂಘಟನೆ  1980ರಲ್ಲಿ ಬಿಜೆಪಿ ಬೆಳೆದ ವೇಗಕ್ಕಿಂತಲೂ  ಹೆಚ್ಚು ವೇಗವಾಗಿ ಬೆಳೆಯುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಓವೈಸಿ ತೀವ್ರ ಖಂಡನೆ ವ್ಯಕ್ತಪಡಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT