ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಸಾಂದರ್ಭಿಕ ಚಿತ್ರ 
ದೇಶ

ಸಾರ್ವಜನಿಕ ವಲಯ ಬ್ಯಾಂಕ್ ಗಳ ಖಾಸಗೀಕರಣವಿಲ್ಲ: ಅರುಣ್ ಜೈಟ್ಲಿ

ಸಾರ್ವಜನಿಕ ವಲಯ ಬ್ಯಾಂಕುಗಳ ಖಾಸಗೀಕರಣವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ:  ಸಾರ್ವಜನಿಕ ವಲಯ ಬ್ಯಾಂಕುಗಳ ಖಾಸಗೀಕರಣವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಎಕನಾಮಿಕ್ ಟೈಮ್ಸ್ ಜಾಗತಿಕ ವ್ಯವಹಾರ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಹಗರಣದ ನಂತರ ಬ್ಯಾಂಕುಗಳ ಖಾಸಗೀಕರಣದ ಬಗ್ಗೆ ಹಲವು ಜನ ಮಾತನಾಡುತ್ತಿದ್ದಾರೆ. ಆದರೆ, ಖಾಸಗೀಕರಣಕ್ಕೆ ರಾಜಕೀಯ ಪಕ್ಷಗಳ ಒಪ್ಪಿಗೆ ಬೇಕಾಗುತ್ತದಲ್ಲದೇ, ಬ್ಯಾಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ
ತರಬೇಕಾಗುತ್ತದೆ  ಇದೊಂದು ಸವಾಲಿನ ಕೆಲಸ ಎಂದರು.

 ಬ್ಯಾಂಕುಗಳ ಖಾಸಗೀಕರಣ ಸಂಬಂಧ ನಿನ್ನೆ ಅರುಣ್ ಜೇಟ್ಲಿ ಅವರೊಂದಿಗೆ ನಿನ್ನೆ ಮಾತುಕತೆ ನಡೆಸಿದ್ದು, 2-3 ಪ್ರಮುಖ ಬ್ಯಾಂಕುಗಳನ್ನು ಹೊರತುಪಡಿಸಿ, ಉಳಿದ ಬ್ಯಾಂಕುಗಳನ್ನು ಹಂತಹಂತವಾಗಿ  ಖಾಸಗೀಕರಣಗೊಳಿಸುವಂತೆ ಪ್ರಸ್ತಾವ ಮಾಡಲಾಗಿದೆ ಎಂದು  ಎಫ್ ಐಸಿಸಿಐ  ಅಧ್ಯಕ್ಷ ರಾಶೇಶ್ ಶಾ ಹೇಳಿದ್ದರು.

 ಸಾರ್ವಜನಿಕ ಬ್ಯಾಂಕುಗಳಲ್ಲಿನ ಪಾಲನ್ನು ಶೇಕಡ 50 ರಷ್ಟು ಇಳಿಸುವಂತೆ ಅಶೋಚಾಮ್ ಸರ್ಕಾರವನ್ನು ಒತ್ತಾಯಿಸಿತ್ತು. ಬ್ಯಾಂಕುಗಳ ಖಾಸಗೀಕರಣಕ್ಕೆ ಹಲವು ಉದ್ಯಮ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

SCROLL FOR NEXT