ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಸಾಂದರ್ಭಿಕ ಚಿತ್ರ 
ದೇಶ

ಸಾರ್ವಜನಿಕ ವಲಯ ಬ್ಯಾಂಕ್ ಗಳ ಖಾಸಗೀಕರಣವಿಲ್ಲ: ಅರುಣ್ ಜೈಟ್ಲಿ

ಸಾರ್ವಜನಿಕ ವಲಯ ಬ್ಯಾಂಕುಗಳ ಖಾಸಗೀಕರಣವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ನವದೆಹಲಿ:  ಸಾರ್ವಜನಿಕ ವಲಯ ಬ್ಯಾಂಕುಗಳ ಖಾಸಗೀಕರಣವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಎಕನಾಮಿಕ್ ಟೈಮ್ಸ್ ಜಾಗತಿಕ ವ್ಯವಹಾರ ಶೃಂಗಸಭೆಯಲ್ಲಿ ಮಾತನಾಡಿದ ಅವರು, ಪಂಜಾಬ್ ನ್ಯಾಷನಲ್ ಬ್ಯಾಂಕಿನ 11.400 ಕೋಟಿ ರೂ. ಹಗರಣದ ನಂತರ ಬ್ಯಾಂಕುಗಳ ಖಾಸಗೀಕರಣದ ಬಗ್ಗೆ ಹಲವು ಜನ ಮಾತನಾಡುತ್ತಿದ್ದಾರೆ. ಆದರೆ, ಖಾಸಗೀಕರಣಕ್ಕೆ ರಾಜಕೀಯ ಪಕ್ಷಗಳ ಒಪ್ಪಿಗೆ ಬೇಕಾಗುತ್ತದಲ್ಲದೇ, ಬ್ಯಾಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ
ತರಬೇಕಾಗುತ್ತದೆ  ಇದೊಂದು ಸವಾಲಿನ ಕೆಲಸ ಎಂದರು.

 ಬ್ಯಾಂಕುಗಳ ಖಾಸಗೀಕರಣ ಸಂಬಂಧ ನಿನ್ನೆ ಅರುಣ್ ಜೇಟ್ಲಿ ಅವರೊಂದಿಗೆ ನಿನ್ನೆ ಮಾತುಕತೆ ನಡೆಸಿದ್ದು, 2-3 ಪ್ರಮುಖ ಬ್ಯಾಂಕುಗಳನ್ನು ಹೊರತುಪಡಿಸಿ, ಉಳಿದ ಬ್ಯಾಂಕುಗಳನ್ನು ಹಂತಹಂತವಾಗಿ  ಖಾಸಗೀಕರಣಗೊಳಿಸುವಂತೆ ಪ್ರಸ್ತಾವ ಮಾಡಲಾಗಿದೆ ಎಂದು  ಎಫ್ ಐಸಿಸಿಐ  ಅಧ್ಯಕ್ಷ ರಾಶೇಶ್ ಶಾ ಹೇಳಿದ್ದರು.

 ಸಾರ್ವಜನಿಕ ಬ್ಯಾಂಕುಗಳಲ್ಲಿನ ಪಾಲನ್ನು ಶೇಕಡ 50 ರಷ್ಟು ಇಳಿಸುವಂತೆ ಅಶೋಚಾಮ್ ಸರ್ಕಾರವನ್ನು ಒತ್ತಾಯಿಸಿತ್ತು. ಬ್ಯಾಂಕುಗಳ ಖಾಸಗೀಕರಣಕ್ಕೆ ಹಲವು ಉದ್ಯಮ ಸಂಸ್ಥೆಗಳು ಬೆಂಬಲ ವ್ಯಕ್ತಪಡಿಸಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT