ಶ್ರೀದೇವಿ 
ದೇಶ

ಶ್ರೀದೇವಿ ಪಾರ್ಥಿವ ಶರೀರ ಸೋಮವಾರ ಭಾರತಕ್ಕೆ ಆಗಮನ, ದುಬೈನಲ್ಲಿ ಮರಣೋತ್ತರ ಪರೀಕ್ಷೆ ಪೂರ್ಣ

ನಟಿ ಶ್ರೀದೇವಿ ಪಾರ್ಥಿವ ಶರೀರ ನಾಳೆ (ಸೋಮವಾರ) ಭಾರತಕ್ಕೆ ಕರೆತರಲಾಗುತ್ತದೆ ಎಂದು ಶ್ರೀದೇವಿ ಕುಟುಂಬಿಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಂಬೈ: ನಟಿ ಶ್ರೀದೇವಿ ಪಾರ್ಥಿವ ಶರೀರ ನಾಳೆ (ಸೋಮವಾರ) ಭಾರತಕ್ಕೆ ಕರೆತರಲಾಗುತ್ತದೆ ಎಂದು ಶ್ರೀದೇವಿ ಕುಟುಂಬಿಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಮ್ಮ ಕುಟುಂಬದವರ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ದುಬೈ ಗೆ ತೆರಳಿದ್ದ ಶ್ರೀದೇವಿ ಶನಿವಾರ ರಾತ್ರಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದರು.
"ಬೋನಿ ಕಪೂರ್, ಜಾಹ್ನವಿ, ಖುಷಿ ಹಾಗೂ ಸಂಪೂರ್ಣ ಕಪೂರ್ ಕುಟುಂಬ, ಅಯ್ಯಪ್ಪನ್ ಹಾಗೂ ಮಾರ್ವಾ ಕುಟುಂಬವು ಶ್ರೀದೇವಿ ಕಪೂರ್ ಅವರ ಅಕಾಲಿಕ ನಿಧನದಿಂದ ಆಘಾತಕ್ಕೊಳಗಾಗಿದೆ" ಎಂದು ಕಪೂರ್ ಕುಟುಂಬದ ಪರವಾಗಿ ಯಶ್ ರಾಜ್ ಫಿಲಮ್ಸ್ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ತಿಳಿಸಿದೆ.
ಶ್ರೀದೇವಿ ಅವರ ಪಾರ್ಥಿವ ಶರೀರವು ನಾಳೆ (ಸೋಮವಾರ) ಭಾರತಕ್ಕೆ ಆಗಮಿಸಲಿದೆ,. ಸಂತಾಪ ವ್ಯಕ್ತಪಡಿಸಿದ, ಶ್ರೀದೇವಿ ಅವರ ಆತ್ಮಕ್ಕೆ ಶಾಂತಿ ಕೋರಿದ ಪ್ರತಿಯೊಬ್ಬರಿಗೆ ಧನ್ಯವಾದ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಶ್ರೀದೇವಿ ಅವರ ಕಳೇಬರವನ್ನು ಚಾರ್ಟರ್ಡ್ ವಿಮಾನದಲ್ಲಿ ಕರೆತರಲಾಗುತ್ತದೆ ಎನ್ನುವ ನಿರೀಕ್ಷೆ ಇದೆ. ಈ ಹಿಂದೆ ಯುಎಇ ಮಾದ್ಯಮಗಳ ವರದಿ ಸಹ ನಾಳೆ ಶ್ರೀದೇವಿ ದೇಹವು ಭಾರತಕ್ಕೆ ಆಗಮಿಸಲಿದೆ ಎಂದಿದ್ದವು.
ಶ್ರೀದೇವಿ ಪಾರ್ಥಿವ ಶರೀರದ ಶವಪರೀಕ್ಷೆಗಳು ಮುಕ್ತಾಯಗೊಂಡಿದೆ. ದುಬೈನ ಜನರಲ್‌ ಡಿಪಾರ್ಟ್‌ಮೆಂಟ್‌ ಆಫ್‌ ಫೋರೆನ್ಸಿಕ್‌ ನಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇದೀಗ ಮರಣೋತ್ತರ ಪರೀಕ್ಷಾ ವರದಿಗಾಗಿ ಕುಟುಂಬವು ಕಾಯುತ್ತಿದೆ ಎಂದು ಯುಎಇ ನ ಖಲೀಜ ಟೈಮ್ಸ್ ವರದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT