ಶ್ರೀದೇವಿ 
ದೇಶ

ಶ್ರೀದೇವಿ ಪಾರ್ಥಿವ ಶರೀರ ಸೋಮವಾರ ಭಾರತಕ್ಕೆ ಆಗಮನ, ದುಬೈನಲ್ಲಿ ಮರಣೋತ್ತರ ಪರೀಕ್ಷೆ ಪೂರ್ಣ

ನಟಿ ಶ್ರೀದೇವಿ ಪಾರ್ಥಿವ ಶರೀರ ನಾಳೆ (ಸೋಮವಾರ) ಭಾರತಕ್ಕೆ ಕರೆತರಲಾಗುತ್ತದೆ ಎಂದು ಶ್ರೀದೇವಿ ಕುಟುಂಬಿಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಂಬೈ: ನಟಿ ಶ್ರೀದೇವಿ ಪಾರ್ಥಿವ ಶರೀರ ನಾಳೆ (ಸೋಮವಾರ) ಭಾರತಕ್ಕೆ ಕರೆತರಲಾಗುತ್ತದೆ ಎಂದು ಶ್ರೀದೇವಿ ಕುಟುಂಬಿಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ತಮ್ಮ ಕುಟುಂಬದವರ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳಲು ದುಬೈ ಗೆ ತೆರಳಿದ್ದ ಶ್ರೀದೇವಿ ಶನಿವಾರ ರಾತ್ರಿ ಹೃದಯಾಘಾತದಿಂದಾಗಿ ಮೃತಪಟ್ಟಿದ್ದರು.
"ಬೋನಿ ಕಪೂರ್, ಜಾಹ್ನವಿ, ಖುಷಿ ಹಾಗೂ ಸಂಪೂರ್ಣ ಕಪೂರ್ ಕುಟುಂಬ, ಅಯ್ಯಪ್ಪನ್ ಹಾಗೂ ಮಾರ್ವಾ ಕುಟುಂಬವು ಶ್ರೀದೇವಿ ಕಪೂರ್ ಅವರ ಅಕಾಲಿಕ ನಿಧನದಿಂದ ಆಘಾತಕ್ಕೊಳಗಾಗಿದೆ" ಎಂದು ಕಪೂರ್ ಕುಟುಂಬದ ಪರವಾಗಿ ಯಶ್ ರಾಜ್ ಫಿಲಮ್ಸ್ ಬಿಡುಗಡೆಗೊಳಿಸಿದ ಹೇಳಿಕೆಯಲ್ಲಿ ತಿಳಿಸಿದೆ.
ಶ್ರೀದೇವಿ ಅವರ ಪಾರ್ಥಿವ ಶರೀರವು ನಾಳೆ (ಸೋಮವಾರ) ಭಾರತಕ್ಕೆ ಆಗಮಿಸಲಿದೆ,. ಸಂತಾಪ ವ್ಯಕ್ತಪಡಿಸಿದ, ಶ್ರೀದೇವಿ ಅವರ ಆತ್ಮಕ್ಕೆ ಶಾಂತಿ ಕೋರಿದ ಪ್ರತಿಯೊಬ್ಬರಿಗೆ ಧನ್ಯವಾದ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ಶ್ರೀದೇವಿ ಅವರ ಕಳೇಬರವನ್ನು ಚಾರ್ಟರ್ಡ್ ವಿಮಾನದಲ್ಲಿ ಕರೆತರಲಾಗುತ್ತದೆ ಎನ್ನುವ ನಿರೀಕ್ಷೆ ಇದೆ. ಈ ಹಿಂದೆ ಯುಎಇ ಮಾದ್ಯಮಗಳ ವರದಿ ಸಹ ನಾಳೆ ಶ್ರೀದೇವಿ ದೇಹವು ಭಾರತಕ್ಕೆ ಆಗಮಿಸಲಿದೆ ಎಂದಿದ್ದವು.
ಶ್ರೀದೇವಿ ಪಾರ್ಥಿವ ಶರೀರದ ಶವಪರೀಕ್ಷೆಗಳು ಮುಕ್ತಾಯಗೊಂಡಿದೆ. ದುಬೈನ ಜನರಲ್‌ ಡಿಪಾರ್ಟ್‌ಮೆಂಟ್‌ ಆಫ್‌ ಫೋರೆನ್ಸಿಕ್‌ ನಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಇದೀಗ ಮರಣೋತ್ತರ ಪರೀಕ್ಷಾ ವರದಿಗಾಗಿ ಕುಟುಂಬವು ಕಾಯುತ್ತಿದೆ ಎಂದು ಯುಎಇ ನ ಖಲೀಜ ಟೈಮ್ಸ್ ವರದಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT