ಶಿವರಾಜ್ ಸಿಂಗ್ ಚೌಹಾಣ್ 
ದೇಶ

ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ ಮಧ್ಯ ಪ್ರದೇಶ ಸೈನಿಕ ಕುಟುಂಬಕ್ಕೆ 1 ಕೋಟಿ ರೂ, ಮುಖ್ಯಮಂತ್ರಿ ಚೌಹಾಣ್ ಘೋಷಣೆ

ಕರ್ತವ್ಯ ನಿರತರಾಗಿದ್ದ ವೇಳೆ ಹುತಾತ್ಮರಾದ ರಾಜ್ಯದ ಪ್ರತಿ ಸೈನಿಕರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ವಿತರಿಸುವುದಾಗಿ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.

ಮೊರೇನಾ(ಮಧ್ಯ ಪ್ರದೇಶ): ಕರ್ತವ್ಯ ನಿರತರಾಗಿದ್ದ ವೇಳೆ ಹುತಾತ್ಮರಾದ ರಾಜ್ಯದ ಪ್ರತಿ ಸೈನಿಕರ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ ವಿತರಿಸುವುದಾಗಿ ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಘೋಷಿಸಿದ್ದಾರೆ.
"ರಾಷ್ಟ್ರದ ಗಡಿ ಕಾಯುತ್ತಿರುವಾಗ ತನ್ನ ಪ್ರಾಣ ತ್ಯಾಗ ಮಾಡುವ ಯಾವುದೇ ಮಧ್ಯ ಪ್ರದೇಶದ ಸೈನಿಕನ ಕುಟುಂಬಕ್ಕೆ ರಾಜ್ಯ ಸರ್ಕಾರ ಒಂದು ಕೋಟಿ ನೀಡಲಿದೆ. ಅಲ್ಲದೆ ಸೈನಿಕನ ಪೋಷಕರಿಗೆ ಮಾಸಿಕ ಐದು ಸಾವಿರ ರೂ. ಪಿಂಚಣಿ ಹಾಗೂ ಕುಟುಂಬದಲ್ಲಿ ಓರ್ವ ವ್ಯಕ್ತಿಗೆ  ಉದ್ಯೋಗ ಒದಗಿಸಲಿದೆ" ಚೌಹಾಣ್ ಹೇಳಿದ್ದಾರೆ. 
ಮೊರೇನಾದಲ್ಲಿ ಆಯೋಜಿಸಲಾಗಿದ್ದ ಹುತಾತ್ಮರ ಸ್ಮಾರಕ ಉದ್ಘಾಟನೆ ಸಮಾರಂಭದಲ್ಲಿ ಅವರು ಮಾತನಾಡಿದರು. 
"ಮೊರೇನಾ ಹಾಗೂ ಅದರ ಅಕ್ಕಪಕ್ಕದ ಭಾಗದ ಯುವಕರು ಯಾವಾಗಲೂ ಭಾರತ ಮಾತೆಯ ರಕ್ಷಣೆಗೆ ಸದಾ ಮುಂದಿರುತ್ತಾರೆ ಎಂದ ಚೌಹಾಣ್ ಸೇನಾಧಿಕಾರಿಗಳು, ಸೈನಿಕರಾಗಿ ಸೇವೆ ಸಲ್ಲಿಸುತ್ತಿರುವ ಮಧ್ಯ ಪ್ರದೇಶದ ಮೂಲದ ಯುವಕರನ್ನು ಶ್ಲಾಘಿಸಿದ್ದಾರೆ.
ಸ್ಮಾರಕ ಉದ್ಘಾಟನೆ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ ಭಾಗವಹಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT