ಮುಜಾಫರ್ ಪುರ ಅಪಘಾತ: ನಿತೀಶ್ ರತ್ತ ಬೆರಳು ತೋರಿದ ರಾಹುಲ್ ಗಾಂಧಿ 
ದೇಶ

ಮುಜಾಫರ್ ಪುರ ಅಪಘಾತ: ನಿತೀಶ್ ರತ್ತ ಬೆರಳು ತೋರಿದ ರಾಹುಲ್ ಗಾಂಧಿ

ಬಿಹಾರ ಮುಜಾಫರ್ ಪುರದಲ್ಲಿ ನಡೆದ ಅಪಘಾತಕ್ಕೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೊಣೆ ಎಂದು ರಾಹುಲ್ ಹೇಳಿದ್ದಾರೆ.

ನವದೆಹಲಿ: ಬಿಹಾರ ಮುಜಾಫರ್ ಪುರದಲ್ಲಿ ನಡೆದ ಅಪಘಾತಕ್ಕೆ  ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೊಣೆ ಎಂದು ರಾಹುಲ್ ಹೇಳಿದ್ದಾರೆ.
"ಮದ್ಯ ನಿಷೇಧವಾಗಿರುವ ಬಿಹಾರದಲ್ಲಿ ಮದ್ಯ ಸೇವಿಸಿದ್ದ ಭಾರತೀಯ ಜನತಾ ಪಕ್ಷದ ನಾಯಕರು ಒಂಭತ್ತು ಮುಗ್ದ ಮಕ್ಕಳ ಹತ್ಯೆಗೆ ಕಾರಣರಾಗಿದ್ದಾರೆ! ನಿತೀಶ್ ಜೀ, ಇದು ನಿಮ್ಮ ಮದ್ಯ ನಿಷೇಧ ಕ್ರಮದ ಲಕ್ಷಣವೆ?ನಿಮ್ಮ ಆತ್ಮಸಾಕ್ಷಿ ಯಾರನ್ನು ಬೆಂಬಲಿಸಿದೆ, ಬಿಹಾರದ ಮದ್ಯ ನಿಷೇಧ ಕ್ರಮದ ವಾಸ್ತವತೆಯನ್ನೋ ಅಥವಾ ಬಿಜೆಪಿಯ ನಾಯಕನನ್ನೊ?" ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಇದೇ ಶನಿವಾರದಂದು ಮುಜಾಫರ್ ಪುರದ ಅಹಿಯಾಪುರ್ ಎನ್ನುವಲ್ಲಿ ಕಾರೊಂದು ಸರ್ಕಾರಿ ಶಾಲಾ ಕಟ್ಟಡಕ್ಕೆ ಗುದ್ದಿದ ಪರಿಣಾಮ ಒಂಭತ್ತು ಮಕ್ಕಳು ಸತ್ತು 24 ಮಂದಿ ಗಾಯಗೊಂಡಿದ್ದರು. ಅಪಘಾತ ಸಂಭವಿಸಿದ ಬಳಿಕ ರಾಷ್ಟ್ರೀಯ ಜನತಾ ದಳ ನಾಯಕ ತೇಜಸ್ವಿ ಯಾದವ್ ಅಪಘಾತಕ್ಕೆ ಕಾರಣವಾದ ಕಾರು ಬಿಜೆಪಿ ಪ್ರಧಾನ ಕಾರ್ಯದರ್ಶಿಗೆ ಸೇರಿದೆ ಎಂದು ಆರೋಪಿಸಿದ್ದರು.
ಇದೇ ವೇಳೆ ಅಪಘಾತಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್ ಮೋದಿ ಹೇಳಿದ್ದಾರೆ. 
ಅಪಘಾತಕ್ಕೆ ಕಾರಣವಾದ ಕಾರು ಚಾಲಕನನ್ನು ಗುರುತಿಸಲಾಗಿದೆ ಎಂದು ಬಿಹಾರದ ಪೋಲೀಸರು ಸೋಮವಾರ ತಿಳಿಸಿದ್ದು ಕಾರು ಬಿಜೆಪಿ ನಾಯಕರಿಗೆ ಸೇರಿದ್ದೆ ಎನ್ನುವ ಕುರಿತಂತೆ ಸ್ಪಷ್ಟಪಡಿಸಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT