ಅಂಶು ಪ್ರಕಾಶ್ 
ದೇಶ

ಮುಖ್ಯ ಕಾರ್ಯದರ್ಶಿ ಹಲ್ಲೆ ಪ್ರಕರಣ: ಸಂಪುಟ ಸಭೆಗೆ ಹಾಜರಾದ ಅಂಶು ಪ್ರಕಾಶ್

ಎಎಪಿ ಶಾಸಕರಿಂದ ಹಲ್ಲೆಗೊಳಗಾಗಿದ್ದ ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಇಂದು ರಾಜ್ಯ ಸಚಿವ ಸಂಪುಟ ಸಭೆಗೆ ಹಾಜರಾಗಿದ್ದರು.

ನವದೆಹಲಿ: ಎಎಪಿ ಶಾಸಕರಿಂದ ಹಲ್ಲೆಗೊಳಗಾಗಿದ್ದ ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಇಂದು ರಾಜ್ಯ ಸಚಿವ ಸಂಪುಟ ಸಭೆಗೆ ಹಾಜರಾಗಿದ್ದರು. ದಾಳಿ ನಡೆದ ತರುವಾಯ ಇದೇ ಮೊದಲ ಬಾರಿಗೆ ಅವರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. 
ಯಾವುದೇ ಅಧಿಕಾರಿಗಳ ಮೇಲೆ ಎಎಪಿ ಶಾಸಕರಿಂದ ದೈಹಿಕ ಅಥವಾ ಮೌಖಿಕ ಹಲ್ಲೆ ನಡೆಯುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸ್ಪಷ್ಟನೆ ಕೇಳಿದ ಬಳಿಕ ಪ್ರಕಾಶ್ ಸಭೆಗೆ ಹಾಜರಾಗಿದ್ದರು.
ಮುಖ್ಯ ಕಾರ್ಯದರ್ಶಿಗಳ ಮೇಲೆ ಹಲ್ಲೆ ಪ್ರಕರಣದಲ್ಲಿ ಪೋಲೀಸರಿಗೆ ಮಾಹಿತಿ ನೀಡಿದ್ದ ಮುಖ್ಯಮಂತ್ರಿ ಕೇಜ್ರಿವಾಲ್ ಸಲಹೆಗಾರ ವಿಕೆ ಜೈನ್ ಒಂದು ವಾರದ ಕಾಲ ದೀರ್ಘಾವಧಿ ವೈದ್ಯಕೀಯ ರಜೆ ತೆಗೆದುಕೊಂಡಿದ್ದಾರೆ. ಫೆ.19 ರ ನಂತರದ ಯಾವ ಸಭೆಗೆ ಸಹ ಜೈನ್ ಹಾಜರಾಗಿಲ್ಲ ಎಂದು ಮೂಲಗಳು ಹೇಳಿದೆ.
ಮುಖ್ಯಮಂತ್ರಿಗಳ ನಿವಾಸದಲ್ಲಿ ಮುಖ್ಯ ಕಾರ್ಯದರ್ಶಿ ಪ್ರಕಾಶ್ ಮೇಲೆ ಹಲ್ಲೆ ನಡೆದಿದ್ದನ್ನು ಜೈನ್ ಕಣ್ಣಾರೆ ಕಂಡಿದ್ದಾರೆ ಎಂದು ಕಳೆದ ವಾರ ಪೋಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು. ಆದರೆ ಜೈನ್ ತಾವು ಯಾವ ಹಲ್ಲೆ ಘಟನೆಯನ್ನೂ ಕಂಡಿಲ್ಲ. ನಾನು ಘಟನೆ ನಡೆಯುವ ಸಮಯದಲ್ಲಿ ವಾಶ್ ರೂಂ ಗೆ ತೆರಳಿದ್ದೆ ಎಂದು ಪುನಃ ಹೇಳಿಕೆಯೊಂದರಲ್ಲಿ ತಿಳಿಸಿದ್ದರು.
ಇಂದು ದೆಹಲಿ ರಾಜ್ಯ ಬಜೆಟ್ ಸಂಬಂಧ ಪ್ರಮುಖ ವಿಚಾರಗಳ ಚರ್ಚೆಗಾಗಿ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲಿದ್ದ ಮುಖ್ಯ ಕಾರ್ಯದರ್ಶಿ ಅವರು ಅರವಿಂದ ಕೇಜ್ರಿವಾಲ್ ಗೆ ಪತ್ರ ಬರೆದಿದ್ದು ’ನಾನು ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ. ಆದರೆ ಈ ಸಭೆಯಲ್ಲಿ ನನ್ನ ಮೇಲೆ ಯಾವ ಹಲ್ಲೆಗಳು ನಡೆಯುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬಯಸುವೆ’ ಎಂದು ಕೇಳಿದ್ದರು.
ಮುಂದಿನ ಮಾರ್ಚ್ 16-28ರ ಅವಧಿಯಲ್ಲಿ ದೆಹಲಿಯಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT