ಅಂಶು ಪ್ರಕಾಶ್ 
ದೇಶ

ಮುಖ್ಯ ಕಾರ್ಯದರ್ಶಿ ಹಲ್ಲೆ ಪ್ರಕರಣ: ಸಂಪುಟ ಸಭೆಗೆ ಹಾಜರಾದ ಅಂಶು ಪ್ರಕಾಶ್

ಎಎಪಿ ಶಾಸಕರಿಂದ ಹಲ್ಲೆಗೊಳಗಾಗಿದ್ದ ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಇಂದು ರಾಜ್ಯ ಸಚಿವ ಸಂಪುಟ ಸಭೆಗೆ ಹಾಜರಾಗಿದ್ದರು.

ನವದೆಹಲಿ: ಎಎಪಿ ಶಾಸಕರಿಂದ ಹಲ್ಲೆಗೊಳಗಾಗಿದ್ದ ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಇಂದು ರಾಜ್ಯ ಸಚಿವ ಸಂಪುಟ ಸಭೆಗೆ ಹಾಜರಾಗಿದ್ದರು. ದಾಳಿ ನಡೆದ ತರುವಾಯ ಇದೇ ಮೊದಲ ಬಾರಿಗೆ ಅವರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. 
ಯಾವುದೇ ಅಧಿಕಾರಿಗಳ ಮೇಲೆ ಎಎಪಿ ಶಾಸಕರಿಂದ ದೈಹಿಕ ಅಥವಾ ಮೌಖಿಕ ಹಲ್ಲೆ ನಡೆಯುವುದಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸ್ಪಷ್ಟನೆ ಕೇಳಿದ ಬಳಿಕ ಪ್ರಕಾಶ್ ಸಭೆಗೆ ಹಾಜರಾಗಿದ್ದರು.
ಮುಖ್ಯ ಕಾರ್ಯದರ್ಶಿಗಳ ಮೇಲೆ ಹಲ್ಲೆ ಪ್ರಕರಣದಲ್ಲಿ ಪೋಲೀಸರಿಗೆ ಮಾಹಿತಿ ನೀಡಿದ್ದ ಮುಖ್ಯಮಂತ್ರಿ ಕೇಜ್ರಿವಾಲ್ ಸಲಹೆಗಾರ ವಿಕೆ ಜೈನ್ ಒಂದು ವಾರದ ಕಾಲ ದೀರ್ಘಾವಧಿ ವೈದ್ಯಕೀಯ ರಜೆ ತೆಗೆದುಕೊಂಡಿದ್ದಾರೆ. ಫೆ.19 ರ ನಂತರದ ಯಾವ ಸಭೆಗೆ ಸಹ ಜೈನ್ ಹಾಜರಾಗಿಲ್ಲ ಎಂದು ಮೂಲಗಳು ಹೇಳಿದೆ.
ಮುಖ್ಯಮಂತ್ರಿಗಳ ನಿವಾಸದಲ್ಲಿ ಮುಖ್ಯ ಕಾರ್ಯದರ್ಶಿ ಪ್ರಕಾಶ್ ಮೇಲೆ ಹಲ್ಲೆ ನಡೆದಿದ್ದನ್ನು ಜೈನ್ ಕಣ್ಣಾರೆ ಕಂಡಿದ್ದಾರೆ ಎಂದು ಕಳೆದ ವಾರ ಪೋಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು. ಆದರೆ ಜೈನ್ ತಾವು ಯಾವ ಹಲ್ಲೆ ಘಟನೆಯನ್ನೂ ಕಂಡಿಲ್ಲ. ನಾನು ಘಟನೆ ನಡೆಯುವ ಸಮಯದಲ್ಲಿ ವಾಶ್ ರೂಂ ಗೆ ತೆರಳಿದ್ದೆ ಎಂದು ಪುನಃ ಹೇಳಿಕೆಯೊಂದರಲ್ಲಿ ತಿಳಿಸಿದ್ದರು.
ಇಂದು ದೆಹಲಿ ರಾಜ್ಯ ಬಜೆಟ್ ಸಂಬಂಧ ಪ್ರಮುಖ ವಿಚಾರಗಳ ಚರ್ಚೆಗಾಗಿ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲಿದ್ದ ಮುಖ್ಯ ಕಾರ್ಯದರ್ಶಿ ಅವರು ಅರವಿಂದ ಕೇಜ್ರಿವಾಲ್ ಗೆ ಪತ್ರ ಬರೆದಿದ್ದು ’ನಾನು ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುತ್ತೇನೆ. ಆದರೆ ಈ ಸಭೆಯಲ್ಲಿ ನನ್ನ ಮೇಲೆ ಯಾವ ಹಲ್ಲೆಗಳು ನಡೆಯುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬಯಸುವೆ’ ಎಂದು ಕೇಳಿದ್ದರು.
ಮುಂದಿನ ಮಾರ್ಚ್ 16-28ರ ಅವಧಿಯಲ್ಲಿ ದೆಹಲಿಯಲ್ಲಿ ಬಜೆಟ್ ಅಧಿವೇಶನ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT