ಸಂಗ್ರಹ ಚಿತ್ರ 
ದೇಶ

ದಕ್ಷಿಣ ಭಾರತ ರಾಜ್ಯದ ರಾಜ್ಯಪಾಲರೊಬ್ಬರಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ, ತನಿಖೆ ಆರಂಭ

ದಕ್ಷಿಣ ಭಾರತದ ರಾಜ್ಯಪಾಲರೊಬ್ಬರ ವಿರುದ್ಧ ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪ ಕೇಳಿಬಂದಿದ್ದು, ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ.

ನವದೆಹಲಿ: ದಕ್ಷಿಣ ಭಾರತದ ರಾಜ್ಯಪಾಲರೊಬ್ಬರ ವಿರುದ್ಧ ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪ ಕೇಳಿಬಂದಿದ್ದು, ಆರೋಪಕ್ಕೆ ಸಂಬಂಧಿಸಿದಂತೆ ತನಿಖೆಗೆ ಕೇಂದ್ರ ಸರ್ಕಾರ ಆದೇಶಿಸಿದೆ.
ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿರುವಂತೆ ರಾಜಭವನದ ಮಹಿಳಾ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿರುವ ಕುರಿತಂತೆ ಗೃಹ ಸಚಿವಾಲಯದಲ್ಲಿ ದೂರು ದಾಖಲಾಗಿದ್ದು, ಈ ಸಂಬಂಧ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಕೇಂದ್ರ ಗೃಹ ಸಚಿವಾಲಯ ಈ ಆರೋಪ ಸಂಬಂಧ ಖುದ್ಧ ಗೌಪ್ಯ ತನಿಖೆಗೆ ಆದೇಶಿಸಿದ್ದು, ಆರೋಪಿತ ರಾಜ್ಯಪಾಲ ಮತ್ತು ಆರೋಪ ಮಾಡಿರುವ ಮಹಿಳಾ ಸಿಬ್ಬಂದಿಯ ಹೆಸರು ಯಾವುದೇ ಕಾರಣಕ್ಕೂ ಹೊರಗೆ ಬರದಂತೆ ಗೌಪ್ಯತೆ ಕಾಪಾಡಿಕೊಳ್ಳಲಾಗುತ್ತಿದೆ.
ಈ ಪ್ರಕರಣದ ಕುರಿತು ಕಳೆದ ಮೂರು ದಿನಗಳಿಂದಲೇ ಸುದ್ದಿ ಪ್ರಸಾರವಾಗುತ್ತಿದೆಯಾದರೂ ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ರೀತಿಯ ಮಾಹಿತಿ ನೀಡುತ್ತಿಲ್ಲ. ಆರೋಪಕ್ಕೀಡಾಗಿರುವ ರಾಜ್ಯಪಾಲರು ಯಾರು ಎಂಬುದು ಇನ್ನೂ ನಿಗೂಢವಾಗಿದ್ದು, ಯಾವುದೋ ಕೆಲಸ ಮಾಡಿಕೊಡುವ ಸಲುವಾಗಿ ರಾಜ್ಯಪಾಲರು ಮಹಿಳಾ ಉದ್ಯೋಗಿಯಿಂದ ಲೈಂಗಿಕ ಸಹಕಾರ ಕೇಳಿದರು ಎಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆಯಂತೆ. ಸದ್ಯ ಈ ದೂರಿನ ವಿಚಾರಣೆ ಪ್ರಗತಿಯಲ್ಲಿದ್ದು, ಸಚಿವಾಲಯದಿಂದಲೂ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.
ಸಾಕ್ಷ್ಯ ಸಂಗ್ರಹಕ್ಕೆ ಸೂಚನೆ
ಮೂಲಗಳ ಪ್ರಕಾರ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವಾಲಯ ಈ ಕುರಿತ ಸಾಕ್ಷ್ಯಗಳಿದ್ದಲ್ಲಿ ಕಲೆಹಾಕುವಂತೆ ತನಿಖಾ ಸಂಸ್ಥೆಗಳಿಗೆ ಸೂಚಿಸಿದೆ. ಒಂದೊಮ್ಮೆ ದೂರಿನಲ್ಲಿ ಉಲ್ಲೇಖಿಸಲ್ಪಟ್ಟ ಆರೋಪಕ್ಕೆ ಸಾಕ್ಷ್ಯಗಳು ಸಿಕ್ಕಿದಲ್ಲಿ ಆರೋಪಿ ರಾಜ್ಯಪಾಲರು ರಾಜೀನಾಮೆ ಕೊಡುವ ಪರಿಸ್ಥಿತಿ ಎದುರಾದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ. ಈ ಹಿಂದೆ, ಮೇಘಾಲಯದ ರಾಜ್ಯಪಾಲರಾಗಿದ್ದ ವಿ.ಷಣ್ಮುಗನಾಥನ್ ವಿರುದ್ಧ ಹಗರಣದಲ್ಲಿ ಭಾಗಿಯಾದ ಆರೋಪ ಎದುರಾದಾಗ ಇಂಥದ್ದೇ ಪ್ರಕ್ರಿಯೆಯನ್ನು ಸಚಿವಾಲಯ ನಡೆಸಿತ್ತು. ಕೊನೆಗೆ ರಾಜೀನಾಮೆ ನೀಡುವಂತೆ ಅವರಿಗೆ ಸೂಚಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT